Thursday, February 5, 2026
Thursday, February 5, 2026

ಮಳೆ ಹಾವಳಿಗೆ ರಾಜ್ಯದ ನಾನಾ ಕಡೆ ಜನರ ಸಾವು ಮತ್ತು ಆಸ್ತಿ ಜಖಂ

Date:

ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ.

ಹಲವು ಪ್ರದೇಶಗಳಿಗೆ ನೀರು ನುಗ್ಗಿ ಬದುಕು ದುರ್ಭರವಾಗಿದೆ. ಮಳೆಯಿಂದಾಗಿ ರಾಜ್ಯದಲ್ಲಿ ಶುಕ್ರವಾರ ನಾಲ್ವರು ಅಸುನೀಗಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ತುದೂರು ಗ್ರಾಮದಲ್ಲಿ ಗದ್ದೆಯ ಹೊಂಡಕ್ಕೆ ಬಿದ್ದು ಶಂಕರ್‌ ಬಿನ್‌ ಲಿಂಗಾನಾಯ್ಕ (53) ಮೃತಪಟ್ಟಿದ್ದಾರೆ.

ಶಿವಮೊಗ್ಗದ ಆರ್‌ಎಂಎಲ್‌ ನಗರದ ರಾಜ ಕಾಲುವೆಯ ಮಳೆ ನೀರಿನಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ.

ಮುಂಡರಗಿ ಬಳಿ ಹಳ್ಳದಲ್ಲಿ ಟಿಪ್ಪುಸುಲ್ತಾನ ಅಕ್ಬರಸಾಬ ದೊಡ್ಡಮನಿ (28) ಎಂಬುವರು ಬೈಕ್‌ ಸಮೇತ ಕೊಚ್ಚಿ ಹೋಗಿದ್ದಾರೆ. ಕುಮಟಾದ ಗುಡೇ ಅಂಗಡಿಯಲ್ಲಿ ನೀರಿನ ಪಂಪ್‌ ಸ್ವಿಚ್‌ ಹಾಕಲು ಹೋದ ಸುಮಾ ಎಂಬ ಮಹಿಳೆ ವಿದ್ಯುತ್‌ ಶಾಕ್‌ನಿಂದ ಮೃತಪಟ್ಟಿದ್ದಾರೆ.

ಗಂಗಾವಳಿ, ವರದಾ, ಘಟಪ್ರಭಾ ಸೇರಿ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿವೆ. ತೀರ ಪ್ರದೇಶಗಳಲ್ಲಿ ಮತ್ತೆ ನೆರೆ ಭೀತಿ ಎದುರಾಗಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನಲ್ಲಿ 5 ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.

ಹೇಮಾವತಿ ತುಂಗಾ, ಭದ್ರಾ, ಮಲಪ್ರಭಾ ನದಿಗಳ ಒಳ ಹರಿವು ಹೆಚ್ಚಾಗಿದ್ದರಿಂದ ಆತಂಕ ಆರಂಭವಾಗಿದೆ. ಧಾರವಾಡ ಜಿಲ್ಲೆಯ ಬೆಣ್ಣಿ ಮತ್ತು ಗೂಗಿ ಹಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಮೈಸೂರು, ಹಾಸನ,ಕೊಪ್ಪಳ, ಮಂಡ್ಯ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಮನೆಗಳು, ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಧಾರವಾಡ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ ಗೊಂಡಿದ್ದು, ಎರಡು ದಿನಗಳಲ್ಲಿ 100ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಉತ್ತರ ಕನ್ನಡದ ಕರಾವಳಿ ಮತ್ತು ಘಟ್ಟದ ಮೇಲಿನ ತಾಲೂಕುಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ.
ಸಿಎಂ ತವರು ಹಾವೇರಿ ಜಿಲ್ಲೆಯಲ್ಲಿ ಒಂದೇ ದಿನ 87 ಮನೆಗಳು ಧರೆಗುರುಳಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 354 ವಿದ್ಯುತ್‌ ಕಂಬ, 45 ಟ್ರಾನ್ಸ್‌ಫಾರ್ಮರ್‌ ಹಾನಿಗೀಡಾಗಿವೆ. ಲಿಂಗನಮಕ್ಕಿ, ಟಿಬಿ ಡ್ಯಾಂಗೆ ಒಳ ಹರಿವು ಗಣನೀಯ ಪ್ರಮಾಣ ದಲ್ಲಿ ಹೆಚ್ಚಾಗಿದೆ.

ಮಳೆ ಮುಂದುವರಿದಿದ್ದರಿಂದ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ಕೊಟ್ಟೂರು, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಹಡಗಲಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶನಿ ವಾರ ಕೂಡ ರಜೆ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...