Tuesday, December 16, 2025
Tuesday, December 16, 2025

ಯಶಸ್ವಿ ನಿರ್ದೇಶಕ ನೀಲ್ ಕೈಯಲ್ಲಿ ಮತ್ತೆರಡು ಸಿನಿಮಾಗಳು

Date:

ಕೆಜಿಎಫ್ ಮತ್ತು ಕೆಜಿಎಫ್ 2 ಮೂಲಕ ದೇಶದ ಗಮನ ಸೆಳೆದ ನಿರ್ದೇಶಕ ಪ್ರಶಾಂತ್ ನೀಲ್ ಮತ್ತೆರಡು ಚಿತ್ರಗಳನ್ನು ಕೈಗೆತ್ತಿಕೊಂಡಿದ್ದಾರೆಂದು ತಿಳಿದುಬಂದಿದೆ.

ಒಂದು ಚಿತ್ರದಲ್ಲಿ ಜೂ. ಎನ್.ಟಿ.ಆರ್., ಮತ್ತೊಂದು ಚಿತ್ರದಲ್ಲಿ ಶ್ರೀಮುರಳಿ ನಾಯಕರಾಗಿದ್ದಾರೆ.
ಟಾಲಿವುಡ್ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಅಭಿನಯದ ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ. ಚಿತ್ರದ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನೆನಪಿನಲ್ಲಿ ಉಳಿಯುವ ರಕ್ತದಲ್ಲಿ ನೆನೆದ ನೆಲ, ಅವನ ನೆಲ, ಅವನ ರಾಜ್ಯ, ಆದರೆ ಖಂಡಿತವಾಗಿಯೂ ಅವನ ರಕ್ತವಲ್ಲ’ ಎಂದು ಬರೆದು ಜೂನಿಯರ್ ಎನ್ಟಿಆರ್ ಅವರ ಫಸ್ಟ್ ಲುಕ್ ಫೋಟೋ ಪೋಸ್ಟ್ ಮಾಡಿದ್ದಾರೆ.
ಒಂದು ಚಿತ್ರವನ್ನು ನಿರ್ದೇಶಿಸಲಿರುವ ಅವರು ಮತ್ತೊಂದು ಚಿತ್ರಕ್ಕೆ ಕತೆ ಬರೆದಿದ್ದಾರೆ.

ಎನ್ಟಿಆರ್ ಜನ್ಮದಿನದ ಹಿನ್ನೆಲೆಯಲ್ಲಿ ಅವರ 31 ನೇ ಸಿನಿಮಾ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದು, ಸಂಚಲನ ಮೂಡಿಸಿದೆ.

ಇದರೊಂದಿಗೆ ‘ಬಘೀರ’ ಹೊಸ ಚಿತ್ರವನ್ನು ಪ್ರಶಾಂತ್ ನೀಲ್ ಕೈಗೆತ್ತಿಕೊಂಡಿದ್ದಾರೆ. ಹೊಂಬಾಳೆ ಫಿಲಂಸ್ ನಿರ್ಮಾಣದ ‘ಬಘೀರ’ ಚಿತ್ರಕ್ಕೆ ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ಕತೆ ಬರೆದು ಡಾ. ಸೂರಿ ನಿರ್ದೇಶಿಸಿರುವ ಚಿತ್ರದಲ್ಲಿ ನಾಯಕನಾಗಿ ಶ್ರೀಮುರಳಿ ನಟಿಸಲಿದ್ದಾರೆ.

ಮುಂದಿನ ವರ್ಷ ಚಿತ್ರ ಬಿಡುಗಡೆಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...