Wednesday, March 19, 2025
Wednesday, March 19, 2025

ರಷ್ಯ ಸೈನಿಕರ ಉಳಿವಿಗೆ ಉಕ್ರೇನ್ ಸದ್ಯ ಕದನವಿರಾಮ

Date:

ಉಕ್ರೇನಿನ ಪ್ರಮುಖ ಬಂದರು ನಗರ ಮರಿಯುಪೋಲ್ನಲ್ಲಿನ ಅಝೋವ್ಸ್ತಲ್ ಉಕ್ಕುಸ್ಥಾವರದೊಳಗೆ ಸೇರಿಕೊಂಡು ರಷ್ಯಾ ಸೇನೆಯ ವಿರುದ್ಧ ಹೋರಾಡುತ್ತಿರುವ ಯೋಧರು ಹೋರಾಟ ನಿಲ್ಲಿಸುವಂತೆ ಉಕ್ರೇನ್ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ.
ಉಕ್ಕು ಸ್ಥಾವರದಲ್ಲಿ ಇರುವ ಯೋಧರ ಪ್ರಾಣ ರಕ್ಷಿಸುವ ಉದ್ದೇಶದಿಂದ ಸೇನೆ ಈ ಆದೇಶ ನೀಡಿದೆ.

ಸ್ಥಾವರದೊಳಗೆ ಗಾಯಗೊಂಡಿರುವ ಹಾಗೂ ಮೃತಪಟ್ಟಿರುವ ಯೋಧರನ್ನು ತಕ್ಷಣ ಅಲ್ಲಿಂದ ಸ್ಥಳಾಂತರಿಸುವ ಪ್ರಕ್ರಿಯೆಗೆ ಅವಕಾಶ ನೀಡುವ ಉದ್ದೇಶವಿದೆ ಎಂದು ಸ್ಥಾವರದೊಳಗಿಂದ ಯುದ್ಧ ಮುಂದುವರಿಸಿದ್ದ ಉಕ್ರೇನ್ ಸೇನಾ ತುಕಡಿಯ ಕಮಾಂಡರ್ ಡೆನಿಸ್ ಪ್ರೊಕೊಪೆಂಕೊ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

3 ವಿಷಯಗಳಿಗೆ ಆದ್ಯತೆ ನೀಡುವಂತೆ ನಮಗೆ ಸೂಚಿಸಲಾಗಿತ್ತು. ನಾಗರಿಕರು, ಗಾಯಗೊಂಡವರು ಮತ್ತು ಮೃತಪಟ್ಟವರು. ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈಗ ಗಾಯಾಳುಗಳು ಮತ್ತು ಮೃತರ ಬಗ್ಗೆ ಗಮನ ಹರಿಸಬೇಕಾಗಿದೆ. ಮಾತೃಭೂಮಿಗಾಗಿ ಪ್ರಾಣತ್ಯಾಗ ಮಾಡಿದ ಹೀರೋಗಳ ಅಂತ್ಯಸಂಸ್ಕಾರವನ್ನು ಅವರ ಕುಟುಂಬದವರು ಗೌರವಪೂರ್ವಕವಾಗಿ ನಡೆಸುವರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ತಾನು ಸೆರೆಹಿಡಿದ ರಷ್ಯಾದ ಯೋಧರನ್ನು ರಷ್ಯಾ ಸೆರೆಹಿಡಿದ ತನ್ನ ಯೋಧರ ಜೊತೆ ವಿನಿಮಯ ಮಾಡಿಕೊಳ್ಳುವ ಬಗ್ಗೆ ಮಾತುಕತೆ ಮುಂದುವರಿದಿದೆ ಎಂದು ಉಕ್ರೇನ್ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...