Monday, December 15, 2025
Monday, December 15, 2025

ರಷ್ಯ ಸೈನಿಕರ ಉಳಿವಿಗೆ ಉಕ್ರೇನ್ ಸದ್ಯ ಕದನವಿರಾಮ

Date:

ಉಕ್ರೇನಿನ ಪ್ರಮುಖ ಬಂದರು ನಗರ ಮರಿಯುಪೋಲ್ನಲ್ಲಿನ ಅಝೋವ್ಸ್ತಲ್ ಉಕ್ಕುಸ್ಥಾವರದೊಳಗೆ ಸೇರಿಕೊಂಡು ರಷ್ಯಾ ಸೇನೆಯ ವಿರುದ್ಧ ಹೋರಾಡುತ್ತಿರುವ ಯೋಧರು ಹೋರಾಟ ನಿಲ್ಲಿಸುವಂತೆ ಉಕ್ರೇನ್ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ.
ಉಕ್ಕು ಸ್ಥಾವರದಲ್ಲಿ ಇರುವ ಯೋಧರ ಪ್ರಾಣ ರಕ್ಷಿಸುವ ಉದ್ದೇಶದಿಂದ ಸೇನೆ ಈ ಆದೇಶ ನೀಡಿದೆ.

ಸ್ಥಾವರದೊಳಗೆ ಗಾಯಗೊಂಡಿರುವ ಹಾಗೂ ಮೃತಪಟ್ಟಿರುವ ಯೋಧರನ್ನು ತಕ್ಷಣ ಅಲ್ಲಿಂದ ಸ್ಥಳಾಂತರಿಸುವ ಪ್ರಕ್ರಿಯೆಗೆ ಅವಕಾಶ ನೀಡುವ ಉದ್ದೇಶವಿದೆ ಎಂದು ಸ್ಥಾವರದೊಳಗಿಂದ ಯುದ್ಧ ಮುಂದುವರಿಸಿದ್ದ ಉಕ್ರೇನ್ ಸೇನಾ ತುಕಡಿಯ ಕಮಾಂಡರ್ ಡೆನಿಸ್ ಪ್ರೊಕೊಪೆಂಕೊ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

3 ವಿಷಯಗಳಿಗೆ ಆದ್ಯತೆ ನೀಡುವಂತೆ ನಮಗೆ ಸೂಚಿಸಲಾಗಿತ್ತು. ನಾಗರಿಕರು, ಗಾಯಗೊಂಡವರು ಮತ್ತು ಮೃತಪಟ್ಟವರು. ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈಗ ಗಾಯಾಳುಗಳು ಮತ್ತು ಮೃತರ ಬಗ್ಗೆ ಗಮನ ಹರಿಸಬೇಕಾಗಿದೆ. ಮಾತೃಭೂಮಿಗಾಗಿ ಪ್ರಾಣತ್ಯಾಗ ಮಾಡಿದ ಹೀರೋಗಳ ಅಂತ್ಯಸಂಸ್ಕಾರವನ್ನು ಅವರ ಕುಟುಂಬದವರು ಗೌರವಪೂರ್ವಕವಾಗಿ ನಡೆಸುವರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ತಾನು ಸೆರೆಹಿಡಿದ ರಷ್ಯಾದ ಯೋಧರನ್ನು ರಷ್ಯಾ ಸೆರೆಹಿಡಿದ ತನ್ನ ಯೋಧರ ಜೊತೆ ವಿನಿಮಯ ಮಾಡಿಕೊಳ್ಳುವ ಬಗ್ಗೆ ಮಾತುಕತೆ ಮುಂದುವರಿದಿದೆ ಎಂದು ಉಕ್ರೇನ್ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...