Thursday, February 5, 2026
Thursday, February 5, 2026

ಅಡ್ಡಹಾದಿಯಿಂದ ಬಿಜೆಪಿ ಅಧಿಕಾರಕ್ಕೆ ಪ್ರಯತ್ನ-ಕುಮಾರಸ್ವಾಮಿ

Date:

2006ರಲ್ಲಿ ಜೆಡಿಎಸ್ ದೆಸೆಯಿಂದ ಅಧಿಕಾರದ ರುಚಿ ಕಂಡ ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿ ಆಗಿಬಿಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು,ಬಿಜೆಪಿಯ ನಯವಂಚಕ & ಅನೈತಿಕ ರಾಜಕಾರಣದ ಮುಖವನ್ನು ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮುನಿರಾಜು ಎಂಬ ಮಹಾಶಯರೇ ಬಹಿರಂಗಪಡಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವುದು ಅಡ್ಡದಾರಿಯಲ್ಲೇ ಎನ್ನುವುದು ಈಗ ರುಜುವಾತಾಗಿದೆ. 1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು!!’ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಆಪರೇಷನ್ ಕಮಲ ಎಂಬ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಬಿಜೆಪಿ ಅಭದ್ರಗೊಳಿಸಿದೆ ಎಂದು ಟೀಕಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...