Sunday, December 14, 2025
Sunday, December 14, 2025

ಸುಪ್ರೀಂ ಆದೇಶದಂತೆಯೇ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ-ಅಶೋಕ್

Date:

ಸುಪ್ರೀಂಕೋರ್ಟ್‌ ಆದೇಶದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮಾಡಲಾಗುವುದು, ಈ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕಂದಾಯ ಇಲಾಖೆ ಆರ್‌.ಅಶೋಕ್‌ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಇಷ್ಟುದೊಡ್ಡದಾಗಿ ಬೆಳೆದಿದೆ. ಇದು ಕಾರ್ಯಕರ್ತರ ಪಕ್ಷ. ಮುಂಬರುವ ಎಲ್ಲಾ ಚುನಾವಣೆಗಳಿಗೆ ಪಕ್ಷ ಸಕಲ ಸಿದ್ಧತಾ ಕಾರ್ಯ ಆರಂಭಿಸಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತಹ ಪ್ರಬಲ ನಾಯಕತ್ವನ್ನು ಹೊಂದಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವವನ್ನು ಹೊಂದಿದ್ದೇವೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ನಡೆಸಲಿದ್ದೇವೆ ಎಂದರು.

ಬಿಬಿಎಂಪಿ ಚುನಾವಣೆಗೆ ಸರ್ಕಾರ ಎಲ್ಲ ಸಿದ್ಧತೆ ಮಾಡಿದೆ.
ಪಕ್ಷವು ಸಹ ಚುನಾವಣಾ ತಯಾರಿ ನಡೆಸಿ ಪೇಜ್‌ ಪ್ರಮುಖ್‌ ಕಾರ್ಯ ಮುಗಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆ ಎದುರಿಸುತ್ತೇವೆ. ಟಿಕೆಟ್‌ ಅಂತಿಮಗೊಳಿಸಲು ಸಮಿತಿ ಇದೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಸ್ಥಿತಿ ವಿಭಿನ್ನ. ಇನ್ನು ಪಕ್ಷದ ಅಧಿಕೃತ ನೇತಾರ ಯಾರು ಎನ್ನುವುದು ನಿರ್ಣಯವಾಗಿಲ್ಲ. ರಾಜ್ಯದಲ್ಲಿಯೂ ನಾಯಕತ್ವಕ್ಕಾಗಿ ನಿರಂತರ ಜಗಳ ಇದೆ. ಕಾಂಗ್ರೆಸ್‌ನವರಿಗೆ ಮುಂದಿನ ನಾಯಕ ಯಾರು ಎಂದರೆ ಉತ್ತರ ಇಲ್ಲ ಎಂದು ಲೇವಡಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...