Thursday, August 13, 2026
Thursday, August 13, 2026

ಸುಪ್ರೀಂ ಆದೇಶದಂತೆಯೇ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ-ಅಶೋಕ್

Date:

ಸುಪ್ರೀಂಕೋರ್ಟ್‌ ಆದೇಶದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಮಾಡಲಾಗುವುದು, ಈ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕಂದಾಯ ಇಲಾಖೆ ಆರ್‌.ಅಶೋಕ್‌ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಇಷ್ಟುದೊಡ್ಡದಾಗಿ ಬೆಳೆದಿದೆ. ಇದು ಕಾರ್ಯಕರ್ತರ ಪಕ್ಷ. ಮುಂಬರುವ ಎಲ್ಲಾ ಚುನಾವಣೆಗಳಿಗೆ ಪಕ್ಷ ಸಕಲ ಸಿದ್ಧತಾ ಕಾರ್ಯ ಆರಂಭಿಸಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಂತಹ ಪ್ರಬಲ ನಾಯಕತ್ವನ್ನು ಹೊಂದಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವವನ್ನು ಹೊಂದಿದ್ದೇವೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ನಡೆಸಲಿದ್ದೇವೆ ಎಂದರು.

ಬಿಬಿಎಂಪಿ ಚುನಾವಣೆಗೆ ಸರ್ಕಾರ ಎಲ್ಲ ಸಿದ್ಧತೆ ಮಾಡಿದೆ.
ಪಕ್ಷವು ಸಹ ಚುನಾವಣಾ ತಯಾರಿ ನಡೆಸಿ ಪೇಜ್‌ ಪ್ರಮುಖ್‌ ಕಾರ್ಯ ಮುಗಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಬಿಬಿಎಂಪಿ ಚುನಾವಣೆ ಎದುರಿಸುತ್ತೇವೆ. ಟಿಕೆಟ್‌ ಅಂತಿಮಗೊಳಿಸಲು ಸಮಿತಿ ಇದೆ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಸ್ಥಿತಿ ವಿಭಿನ್ನ. ಇನ್ನು ಪಕ್ಷದ ಅಧಿಕೃತ ನೇತಾರ ಯಾರು ಎನ್ನುವುದು ನಿರ್ಣಯವಾಗಿಲ್ಲ. ರಾಜ್ಯದಲ್ಲಿಯೂ ನಾಯಕತ್ವಕ್ಕಾಗಿ ನಿರಂತರ ಜಗಳ ಇದೆ. ಕಾಂಗ್ರೆಸ್‌ನವರಿಗೆ ಮುಂದಿನ ನಾಯಕ ಯಾರು ಎಂದರೆ ಉತ್ತರ ಇಲ್ಲ ಎಂದು ಲೇವಡಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...