Monday, May 4, 2026
Monday, May 4, 2026

ಲೈಂಗಿಕ ಕಾರ್ಯಕರ್ತೆಯರಿಗೂ ಆಧಾರ್ ಕಾರ್ಡ್ ನೀಡಿ- ಸುಪ್ರೀಂ ನಿರ್ದೇಶನ

Date:

ಲೈಂಗಿಕ ಕಾರ್ಯಕರ್ತರಿಗೆ ಕೂಡ ಆಧಾರ್ ಕಾರ್ಡ್‌ಗಳನ್ನು ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡಿದ ಪ್ರೊಫಾರ್ಮಾ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO)ಯಲ್ಲಿ ಗೆಜೆಟೆಡ್ ಅಧಿಕಾರಿ ಅಥವಾ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕರು ಸಲ್ಲಿಸುತ್ತಾರೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ನ್ಯಾಕೊ) ಅಥವಾ ರಾಜ್ಯ ಏಡ್ಸ್ ನಿಯಂತ್ರಣ ಸಂಘದ ಯೋಜನೆ ನಿರ್ದೇಶಕರು ಸಲ್ಲಿಸಿದ ಆಧಾರದಲ್ಲಿ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ನೀಡಬಹುದು. ವ್ಯಕ್ತಿ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿ ಆ ವ್ಯಕ್ತಿಗೆ ಗೌರವ ನೀಡಬೇಕು ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಎ.ಎಸ್. ಬೋಪಣ್ಣ ಅವರಿದ್ದ ಪೀಠ ತಿಳಿಸಿದೆ.

ಪ್ರತಿಯೊಬ್ಬ ವ್ಯಕ್ತಿಯನ್ನು ಘನತೆಯಿಂದ ನಡೆಸಿಕೊಳ್ಳುವುದು ಮೂಲಭೂತ ಹಕ್ಕಾಗಿದೆ ಎಂದು ಸುಪ್ರೀಂಕೋರ್ಟ್​ ಹೇಳಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಪೀಠವು ಲೈಂಗಿಕ ಕಾರ್ಯಕರ್ತೆಯರ ಗೌಪ್ಯತೆಯನ್ನು ಉಲ್ಲಂಘಿಸಬಾರದು ಮತ್ತು ಅವರ ಗುರುತನ್ನು ಬಹಿರಂಗಪಡಿಸಬಾರದು ಎಂದು ಹೇಳಿದೆ.

NACO ಗೆಜೆಟೆಡ್ ಅಧಿಕಾರಿ ಅಥವಾ ಆಯಾ ರಾಜ್ಯ ಸರ್ಕಾರಗಳ ಆರೋಗ್ಯ ಇಲಾಖೆಯ ಗೆಜೆಟೆಡ್ ಅಧಿಕಾರಿ ನೀಡಿದ ಪ್ರಮಾಣಪತ್ರವನ್ನು ಸಲ್ಲಿಸಿದರೆ ಗುರುತಿನ ಪುರಾವೆಯನ್ನು ಒತ್ತಾಯಿಸದೆಯೇ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬಹುದು ಎಂದು UIDAI ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿತ್ತು.

ಯಾವುದೇ ಗುರುತಿನ ಪುರಾವೆ ಹೊಂದಿರದ ಮತ್ತು ಪಡಿತರ ವಿತರಣೆಯಿಂದ ವಂಚಿತರಾಗಿರುವ ಲೈಂಗಿಕ ಕಾರ್ಯಕರ್ತೆಯರನ್ನು ಗುರುತಿಸುವ ಪ್ರಕ್ರಿಯೆಯನ್ನು ಮುಂದುವರಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...