ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 8 ರೂಪಾಯಿ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 6ರೂ.ಗಳಷ್ಟು ಕಡಿಮೆ ಮಾಡಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗೆ 200 ರೂಪಾಯಿಗಳ ಸಬ್ಸಿಡಿಯನ್ನು ಕೊಡುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ತಿಳಿಸಿದ್ದಾರೆ.
ಸಿಮೆಂಟ್ ನ ಲಭ್ಯತೆಯನ್ನು ಸುಧಾರಿಸಲು ಮತ್ತು ಸಿಮೆಂಟ್ ವೆಚ್ಚವನ್ನು ಕಡಿಮೆ ಮಾಡಲು ಉತ್ತಮ ಲಾಜಿಸ್ಟಿಕ್ಸ್ ಮೂಲಕ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸೀತಾರಾಮನ್ ಅವರು ಹೇಳಿದ್ದಾರೆ.
ಬಜೆಟ್ ನಲ್ಲಿ ಘೋಷಿಸಲಾದ ಸಾಮಾನ್ಯ ಸಬ್ಸಿಡಿಯಾದ 1.05 ಲಕ್ಷ ಕೋಟಿ ರೂ.ಗಿಂತ 1.10 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ರಸಗೊಬ್ಬರ ಸಬ್ಸಿಡಿಯನ್ನು ಸೀತಾರಾಮನ್ ನಿನ್ನೆ ಶನಿವಾರ ಮಾಹಿತಿ ತಿಳಿಸಿದ್ದಾರೆ.