Sunday, December 14, 2025
Sunday, December 14, 2025

ಬೆಂಗಳೂರಿನಲ್ಲಿ ಕೋವಿಡ್ ಹೊಸಪ್ರಕರಣ ಪತ್ತೆ!

Date:

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ 100 ಆಸುಪಾಸಿನಲ್ಲಿದ್ದ ಕೊರೋನಾ ಸೋಂಕು ಹೊಸ ಪ್ರಕರಣಗಳು 150ಕ್ಕೆ ಹೆಚ್ಚಳವಾಗಿವೆ.

ನಗರದಲ್ಲಿ ಶನಿವಾರ 150 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 162 ಮಂದಿ ಗುಣಮುಖರಾಗಿದ್ದಾರೆ.
ಸೋಂಕಿತರ ಸಾವು ವರದಿಯಾಗಿಲ್ಲ. ಸದ್ಯ 1579 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 12 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ.1.2ರಷ್ಟುದಾಖಲಾಗಿದೆ.

ಶುಕ್ರವಾರಕ್ಕೆ ಹೋಲಿಸಿದರೆ ಪರೀಕ್ಷೆಗಳಲ್ಲಿ ಹೆಚ್ಚಿನ ವ್ಯತ್ಯಯವಾಗದಿದ್ದರೂ ಹೊಸ ಪ್ರಕರಣಗಳು ಬರೋಬ್ಬರಿ 61 ಹೆಚ್ಚಳವಾಗಿವೆ. (ಶುಕ್ರವಾರ 89 ಕೇಸ್‌, ಸಾವು ಶೂನ್ಯ, ಪಾಸಿಟಿವಿಟಿ ದರ ಶೇ.0.84)ಬೀದಿಗೆ ಬಂದ ಕೋವಿಡ್ ವಾರಿಯರ್ಸ್ ಕುಟುಂಬಗಳು
ಈ ಹಿಂದೆ ಮೇ 11ರಂದು 156 ಪ್ರಕರಣಗಳು ಪತ್ತೆಯಾಗಿದ್ದವು.

ಬಳಿಕ ಇಳಿಮುಖವಾಗಿ ಕಳೆದ ಒಂದು ವಾರದಿಂದ ಕೊರೋನಾ ಪ್ರಕರಣಗಳು 100ರ ಗಡಿಯಲ್ಲಿ ವರದಿಯಾಗುತ್ತಿದ್ದವು. ಈಗ ಮತ್ತೆ 11 ದಿನಗಳ ಬಳಿಕ 150ಕ್ಕೆ ಹೆಚ್ಚಳವಾಗಿವೆ. ರಾಜ್ಯದ ಒಟ್ಟಾರೆ ಸೋಂಕು ಪ್ರಕರಣಗಳ ಪೈಕಿ ಶೇ.97ರಷ್ಟು(155ರಲ್ಲಿ 150 ಕೇಸ್‌) ಬೆಂಗಳೂರು ಒಂದರಲ್ಲಿಯೇ ಪತ್ತೆಯಾಗಿವೆ.

ಇನ್ನು ಪರೀಕ್ಷೆ ಹೆಚ್ಚಳವಾಗದಿದ್ದರೂ ಹೊಸ ಪ್ರಕರಣಗಳು ಹೆಚ್ಚಾಗಿರುವುದು ಒಂದಿಷ್ಟುಆತಂಕ ಮೂಡಿಸಿದೆ.
ಸದ್ಯ ಸಕ್ರಿಯ ಸೋಂಕಿತರ ಪೈಕಿ 9 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಈ ಪೈಕಿ ಐಸಿಯುನಲ್ಲಿ ಒಬ್ಬರು, ಆಕ್ಸಿಜನ್‌ ಹಾಸಿಗೆಯಲ್ಲಿ ಇಬ್ಬರು, ಸಾಮಾನ್ಯ ಹಾಸಿಗೆಗಳಲ್ಲಿ ಆರು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಳಿದ 1570 ಮಂದಿ ಮನೆಯಲ್ಲಿ ಆರೈಕೆಯಲ್ಲಿದ್ದಾರೆ. 5ಕ್ಕಿಂತ ಕಡಿಮೆ ಪ್ರಕರಣಗಳಿರುವ ನಾಲ್ಕು ಕ್ಲಸ್ಟರ್‌ ಪ್ರದೇಶಗಳಿವೆ. ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 17.86 ಲಕ್ಷಕ್ಕೆ, ಗುಣಮುಖರ ಸಂಖ್ಯೆ 17.67 ಲಕ್ಷಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 16,964 ಇದೆ ಎಂದು ಬಿಬಿಎಂಪಿ ಕೊರೋನಾ ವರದಿಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...