Tuesday, August 25, 2026
Tuesday, August 25, 2026

‘ಶಾ’ಣಕ್ಯರಿಂದ ರಾಜ್ಯದ ಹಾಲಿ ವಿಧಾನ ಸಭಾ ಸದಸ್ಯರ ಮೌಲ್ಯಮಾಪನ

Date:

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೇವಲ ಒಂದೇ ಒಂದು ವರ್ಷ ಬಾಕಿ ಇದೆ. ರಾಜ್ಯದಲ್ಲಿ ಸ್ವತಂತ್ರವಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಬಿಜೆಪಿ ಹೈಕಮಾಂಡ್ ತನ್ನದೇ ಆದ ಕಾರ್ಯತಂತ್ರ ರೂಪಿಸುತ್ತಿದೆ.

ರಾಜ್ಯದ 30 ಕ್ಷೇತ್ರಗಳಲ್ಲಿರುವ ಬಿಜೆಪಿಯ ಹಾಲಿ ಶಾಸಕರಿಗೆ ಕೋಕ್ ನೀಡಿ, ಹೊಸ ಮುಖಗಳಿಗೆ ಟಿಕೆಟ್ ನೀಡಲು ಗಂಭೀರ ಚಿಂತನೆ ಪಕ್ಷದಲ್ಲಿ ನಡೆದಿವೆ ಎಂದು ಬಿಜೆಪಿ ಉನ್ನತ ಮೂಲಗಳು ಖಚಿತಪಡಿಸಿವೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಸೂಚನೆ ಮೇರೆಗೆ ಖಾಸಗಿ ಏಜೆನ್ಸಿಯ 150 ಸದಸ್ಯರು ರಾಜ್ಯದಲ್ಲಿ ಠಿಕಾಣಿ ಹೂಡಿ ಸಮೀಕ್ಷೆ ನಡೆಸಿದ್ದಾರೆ. ಮೇ 1ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ಈ ತಂಡ ಮೇ 15ರವರೆಗೆ ಪ್ರತಿ ವಿಧಾನಸಭೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಗೌಪ್ಯವಾಗಿ ನಡೆದ ಸಮೀಕ್ಷಾ ವರದಿಯನ್ನು ಕೇಂದ್ರ ಸಚಿವ ಅಮಿತ್ ಶಾಗೆ ಸಲ್ಲಿಸಿದೆ ಎಂದು ಹೇಳಲಾಗಿದೆ.

ಕಳೆದೊಂದು ದಶಕದಿಂದ ದೇಶದಲ್ಲಿ ಬಿಜೆಪಿ ವರ್ಚಸ್ಸು ಹೆಚ್ಚಿದೆ. ಅನೇಕ ರಾಜ್ಯಗಳಲ್ಲಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕ ಬಿಟ್ಟರೆ ಬೇರೆ ರಾಜ್ಯಗಳಲ್ಲಿ ಬಿಜೆಪಿ ಸಂಘಟನಾತ್ಮಕವಾಗಿ ಬೆಳೆದಿಲ್ಲ. ಆದ್ದರಿಂದ, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಬಿಜೆಪಿ ದೊಡ್ಡದೊಂದು ಉಪಾಯ ಮಾಡಿದೆ. ಅದಕ್ಕಾಗಿಯೇ ಅಮಿತ್ ಶಾ ರಾಜ್ಯದಲ್ಲಿ ಖಾಸಗಿ ಏಜೆನ್ಸಿಯಿಂದ ಸರ್ವೆ ಮಾಡಿಸಿದ್ದಾರೆ ಎನ್ನಲಾಗುತ್ತದೆ.

ಸಮೀಕ್ಷಾ ವರದಿ ಅಮಿತ್ ಶಾ ಕೈ ಸೇರಿದೆ. ರಾಜ್ಯದ 30 ಕ್ಷೇತ್ರದ ಹಾಲಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಕೋಕ್ ನೀಡಬೇಕು. ಹೊಸ ಮುಖಗಳಿಗೆ ಅವಕಾಶ ನೀಡಬೇಕು. ಅದರಿಂದ ಬಿಜೆಪಿ ಮತ್ತಷ್ಟು ಸಂಘಟನಾತ್ಮಕವಾಗಿ ಬೆಳೆಯಲು ಅನುಕೂಲವಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಜನರ ಸಮಸ್ಯೆಗೆ ಸ್ಪಂದಿಸದ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸದ, ಸಂಘಟನೆಯಲ್ಲಿ ತೊಡಗದ ರಾಜ್ಯದ 30 ಹಾಲಿ ಶಾಸಕರನ್ನು ಈ ತಂಡ ಪಟ್ಟಿ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ನೀಡಿದರೆ ಅಲ್ಲಿ ಪಕ್ಷಕ್ಕೆ ಹಿನ್ನಡೆ ಆಗಲಿದೆ ಎಂದೂ ಈ ತಂಡ ವರದಿಯಲ್ಲಿ ಸಲಹೆ ನೀಡಿದೆ ಎಂದು ಮೂಲಗಳು ಖಚಿತಪಡಿಸಿವೆ.

ಖಾಸಗಿ ಏಜೆನ್ಸಿ ನೀಡಿದ ವರದಿ ಅನುಷ್ಠಾನವಾದರೆ ರಾಜ್ಯದ 30 ಹಾಲಿ ಬಿಜೆಪಿ ಶಾಸಕರು ಮುಂದಿನ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...