Monday, December 15, 2025
Monday, December 15, 2025

ಚಕ್ರತೀರ್ಥರನ್ನ ಪಠ್ಯಪುಸ್ತಕ ಸಮಿತಿಯಿಂದ ಕಿತ್ತುಹಾಕಿ- ಸಿದ್ಧು ಕಿಡಿ

Date:

ನಾಡಗೀತೆಯನ್ನು ಅವಮಾನ ಮಾಡಿದ, ರಾಷ್ಟ್ರಗೀತೆಯನ್ನು ಗೇಲಿ ಮಾಡಿದ ರೋಹಿತ್‌ ಚಕ್ರತೀರ್ಥನಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಬಿಜೆಪಿ ಸರ್ಕಾರ ನೇಮಕ ಮಾಡಿದೆ. ಸರ್ಕಾರಕ್ಕೆ ನಾಚಿಕೆ, ಮಾನ-ಮರ್ಯಾದೆ ಇದ್ದರೆ ಕೂಡಲೇ ಆತನನ್ನು ಕಿತ್ತು ಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆ ಬಗ್ಗೆ ಲಘುವಾಗಿ ಮಾತನಾಡಲು ಹೋಗಬಾರದು. ಅವರು ರಾಷ್ಟ್ರಕವಿ. ಅಂತಹವರ ಬಗ್ಗೆ ಗೇಲಿ ಮಾಡಿದವರಿಗೆ ಪಠ್ಯಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡುವುದು ಮೂರ್ಖತನ. ಪಠ್ಯ ಪರಿಷ್ಕರಣೆ ಮಾಡಲು ವಿಷಯ ತಜ್ಞರ ಸಮಿತಿ ಮಾಡಬೇಕು. ದೇಶ ಹಾಗೂ ಸಮಾಜದ ಹಿತದೃಷ್ಟಿಯಿಂದ ಯಾರ ಪಠ್ಯ ಇರಬೇಕು. ಯಾರ ಪಠ್ಯ ಇರಬಾರದು ಎಂದು ಅವರು ನಿರ್ಧಾರ ಮಾಡಲಿ. ರೋಹಿತ್‌ ಚಕ್ರತೀರ್ಥ ಆರ್‌ಎಸ್‌ಎಸ್‌ನವರು, ಅವರ ಬದಲು ಯಾವುದೇ ಪಕ್ಷ ಹಾಗೂ ಸಂಘಟನೆಗೆ ಸೇರದ ವಿಷಯ ತಜ್ಞರನ್ನು ಅಧ್ಯಕ್ಷರನ್ನಾಗಿ ಮಾಡಲಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಭಗತ್‌ಸಿಂಗ್‌, ಮಹಾತ್ಮ ಗಾಂಧಿ, ಡಾ.ಬಿ.ಆರ್‌. ಅಂಬೇಡ್ಕರ್‌, ನಾರಾಯಣ ಗುರುಗಳ ವಿಚಾರಗಳನ್ನು ಓದುವುದರಿಂದ ದೇಶಭಕ್ತಿ, ಸಹಿಷ್ಣುತೆ, ಸೌಹಾರ್ದತೆಯ ಮೌಲ್ಯಗಳು ಉದ್ದೀಪನಗೊಳ್ಳುತ್ತವೆ. ಬುದ್ಧ, ಬಸವಣ್ಣ, ಕನಕದಾಸರು ಇವರೆಲ್ಲ ಸಮಾಜ ಸುಧಾರಕರು. ಇಂಥವರ ಬಗ್ಗೆ ಮಕ್ಕಳಿಗೆ ಹೇಳಿ. ವಿದ್ಯಾರ್ಥಿಗಳನ್ನು ಜಾತ್ಯತೀತ ಹಾಗೂ ವೈಜ್ಞಾನಿಕ ಮನೋಭಾವದಿಂದ ನೋಡಬೇಕು. ಮಕ್ಕಳ ಜ್ಞಾನ ವಿಕಾಸವಾಗಬೇಕೋ, ಸಂಕುಚಿತವಾಗಬೇಕೋ, ಎಂದು ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...