Wednesday, July 8, 2026
Wednesday, July 8, 2026

ಟೊಮ್ಯಾಟೊ ದರ ಏರಿತು ಈರುಳ್ಳಿ ಕೊಂಚ ಕುಸಿಯಿತು

Date:

ಕಳೆದ ಅನೇಕ ದಿನಗಳಿಂದ ಟೊಮೆಟೊ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರಿಂದ ಬೆಳೆಗಾರರ ಮುಖದಲ್ಲಿ ಸಂತಸ ನೋಡುವಂತಾಗಿದೆ. ಆದರೆ, ಇದೇ ಸಂದರ್ಭದಲ್ಲಿ ಈರುಳ್ಳಿ ದರ ಭಾರಿ ಪ್ರಮಾಣದಲ್ಲಿ ಇಳಿಮುಖ ಕಂಡು ರೈತರಿಗೆ ಸಂಕಷ್ಟ ಎದುರಾಗಿದೆ.

ಟೊಮೇಟೊ ದರ ಅನೇಕ ಕಡೆ ಕೆಜಿಗೆ 100 ರೂಪಾಯಿ ಗಡಿದಾಟಿದೆ.

ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ದರ ಏರಿಕೆ ಕಂಡಿದೆ. ಕೋಲಾರ ಮಾರುಕಟ್ಟೆಯಲ್ಲಿ ಸಗಟು ದರ ಕ್ವಿಂಟಾಲ್ 6000 ರೂಪಾಯಿಗೆ ಜಿಗಿದಿದೆ. ಏಪ್ರಿಲ್ 23 ರಂದು 1 ಕ್ವಿಂಟಾಲ್ ಟೊಮೆಟೊ ಸಗಟು ದರ ಗರಿಷ್ಠ 3200 ರೂಪಾಯಿ ಇತ್ತು. ದಿನೇ ದಿನೇ ಟೊಮೆಟೊ ಬೆಲೆ ಏರಿಕೆಯಾಗುತ್ತಿರುವುದದಿಂದ ಗ್ರಾಹಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ರಫ್ತು ನಿಷೇಧ ಸೇರಿದಂತೆ ಹಲವು ಕಾರಣಗಳಿಂದಾಗಿ ಈರುಳ್ಳಿ ದರ ಕುಸಿತ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ಈರುಳ್ಳಿ ಸಗಟು ದರ ಕೆಜಿಗೆ ಕೇವಲ 3 ರೂಪಾಯಿಗೆ ಕುಸಿದಿದೆ. 50 ಕೆಜಿಗೆ 500 ರೂ. ದರ ಇದೆ. ಕೆಲವೆಡೆ ಈರುಳ್ಳಿ ದರ ಇದಕ್ಕಿಂತಲೂ ಕಡಿಮೆಯಾಗಿದೆ ಎನ್ನಲಾಗಿದೆ.

ಬೆಳೆದ ಖರ್ಚು ಮಾಡಿದ ಬೆಲೆ ಕೂಡ ರೈತರಿಗೆ ಸಿಗದಂತಹ ಪರಿಸ್ಥಿತಿ ಎದುರಾಗಿದೆ. ಜಮೀನಿನಿಂದ ಮಾರುಕಟ್ಟೆಗೆ ಈರುಳ್ಳಿ ತೆಗೆದುಕೊಂಡು ಹೋದರೆ ಲಾರಿ ಬಾಡಿಗೆ ಕೂಡ ಸಿಗದ ಕಾರಣಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಸಗಟು ದರ 50 ಕೆಜಿ ಚೀಲಕ್ಕೆ 500ರಿಂದ 600 ರೂಪಾಯಿ, 2ನೇ ದರ್ಜೆಯ ಈರುಳ್ಳಿ 70 ಕೆಜಿ ಚೀಲದ ಸಗಟು ದರ 250 ರಿಂದ 300 ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...