Tuesday, August 25, 2026
Tuesday, August 25, 2026

ಜಿಪಂ & ಗ್ರಾಪಂಗಳ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲಾತಿ ಬಗ್ಗೆ ಗಡುವು ನೀಡಿದ ಕೋರ್ಟ್

Date:

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರ ಪುನರ್ವಿಂಗಡಣೆ, ಹಿಂದುಳಿದವರು ಹಾಗೂ ಎಲ್ಲ ವರ್ಗಗಳಿಗೂ ಮೂರು ತಿಂಗಳೊಳಗೆ ಮೀಸಲಾತಿ ನಿಗದಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿರುವ ಹೈಕೋರ್ಟ್ ನಂತರ ಒಂದು ವಾರದೊಳಗೆ ಚುನಾವಣೆ ಪ್ರಕ್ರಿಯೆ ಆರಂಭಿಸಲು ಆಯೋಗಕ್ಕೆ ನಿರ್ದೇಶನ ನೀಡಿದೆ.

ಈ ಕುರಿತು ವಿಚಾರಣೆ ಆರಂಭವಾಗುತ್ತಿದ್ದಂತೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರಿಗೆ ಬಿಬಿಎಂಪಿ ಪ್ರಕರಣದಲ್ಲಿ ಎಂಟು ವಾರಗಳಲ್ಲಿ ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗಡುವು ವಿಧಿಸಿದೆ.

ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿರುವುದಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ತಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರಿದ್ದ ನ್ಯಾಯಪೀಠ ಆದೇಶ ನೀಡಿತು.
ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ ಒಂದು ವಾರದ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿರುವ ನ್ಯಾಯಾಲಯವು ಯಾವುದೇ ಕಾರಣಕ್ಕೂ ಅನಂತರ ಸಮಯ ವಿಸ್ತರಣೆ ಮಾಡುವುದಿಲ್ಲ ಎಂದು ಸರ್ಕಾರಕ್ಕೆ ಸ್ಪಷ್ಟಪಡಿಸಿದೆ.

ಒಂದು ವಾರದ ಬಳಿಕ ಚುನಾವಣೆ ಪ್ರಕ್ರಿಯೆ ಆರಂಭಿಸಲು ಆಯೋಗಕ್ಕೆ ನಿರ್ದೇಶಿಸಿದೆ. ಕ್ಷೇತ್ರ ಪುನರ್ವಿಂಗಡಣೆ ಮತ್ತು ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ವರ್ಗಗಳನ್ನೊಳಗೊಂಡ ಮೀಸಲಾತಿ ನಿರ್ಧರಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಚುನಾವಣಾ ಆಯೋಗದ ನಿವೃತ್ತ ಆಯುಕ್ತರನ್ನೊಳಗೊಂಡ ಸಮಿತಿಯನ್ನು ರಾಜ್ಯ ಸರ್ಕಾರ ನೇಮಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...