Tuesday, August 25, 2026
Tuesday, August 25, 2026

ಸಾಹಿತಿ ದೇವನೂರು ಅವರು ತಮ್ಮ ಪಠ್ಯಕ್ಕೆ ನೀಡಿದ ಅನುಮತಿ ಹಿಂಪಡೆದಿದ್ದಾರೆ

Date:

ಪಕ್ಷ, ತತ್ವ, ಪಂಥ, ಸಿದ್ಧಾಂತಗಳ ಹಿನ್ನೆಲೆಯಲ್ಲಿ ಈ ಹಿಂದೊಮ್ಮೆ ಉಂಟಾಗಿದ್ದ ಸಂಘರ್ಷ ಪ್ರಶಸ್ತಿ ವಾಪ್ಸಿಯಂಥ ಅಭಿಯಾನಕ್ಕೆ ಕಾರಣವಾಗಿತ್ತು. ಇದೀಗ ಪಠ್ಯ ಪರಿಷ್ಕರಣೆ ಸಂಬಂಧ ಉಂಟಾಗಿರುವ ವಿಚಾರವೂ ಕೂಡ ಅಂಥದ್ದೇ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ
ಪಾಠ ವಾಪ್ಸಿ ಎನ್ನುವಂಥ ಬೆಳವಣಿಗೆಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಸಾಹಿತಿ ದೇವನೂರ ಮಹಾದೇವ ಅವರು ತಮ್ಮ ಪಾಠವನ್ನು ಹಿಂಪಡೆಯುವ ಇಂಗಿತ ವ್ಯಕ್ತಪಡಿಸಿದ್ದಲ್ಲದೆ ಅನುಮತಿ ಕೂಡ ನಿರಾಕರಿಸಿದ್ದಾರೆ. ಹತ್ತನೇ ತರಗತಿಯ ಕನ್ನಡ ಪಠ್ಯದಲ್ಲಿ ನನ್ನದೊಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಸೇರಿಸಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದಿರುವ ಅವರು ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ್ದ ಅನುಮತಿ ಕೂಡ ಹಿಂಪಡೆದಿದ್ದೇನೆ ಎಂದಿದ್ದಾರೆ.

ಡಾ.ಜಿ. ರಾಮಕೃಷ್ಣ ಎಂಬವರು ಈ ಬಗ್ಗೆ ದನಿ ಎತ್ತಿದ್ದು, ತಮ್ಮ ಯಾವುದೇ ಬರಹವನ್ನು ಪಠ್ಯದಲ್ಲಿ ಅಳವಡಿಸಬೇಡಿ ಎಂದಿದ್ದಾರೆ. ಇದರೊಂದಿಗೆ ಯಾವುದಾದರೂ ಬರಹ ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ತಮ್ಮ ಅನುಮತಿ ಇರುವುದಿಲ್ಲ ಎಂದೂ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...