Sunday, May 17, 2026
Sunday, May 17, 2026

ಸಾಹಿತಿ ದೇವನೂರು ಅವರು ತಮ್ಮ ಪಠ್ಯಕ್ಕೆ ನೀಡಿದ ಅನುಮತಿ ಹಿಂಪಡೆದಿದ್ದಾರೆ

Date:

ಪಕ್ಷ, ತತ್ವ, ಪಂಥ, ಸಿದ್ಧಾಂತಗಳ ಹಿನ್ನೆಲೆಯಲ್ಲಿ ಈ ಹಿಂದೊಮ್ಮೆ ಉಂಟಾಗಿದ್ದ ಸಂಘರ್ಷ ಪ್ರಶಸ್ತಿ ವಾಪ್ಸಿಯಂಥ ಅಭಿಯಾನಕ್ಕೆ ಕಾರಣವಾಗಿತ್ತು. ಇದೀಗ ಪಠ್ಯ ಪರಿಷ್ಕರಣೆ ಸಂಬಂಧ ಉಂಟಾಗಿರುವ ವಿಚಾರವೂ ಕೂಡ ಅಂಥದ್ದೇ ಹಾದಿ ಹಿಡಿದಿದೆ. ಈ ಹಿನ್ನೆಲೆಯಲ್ಲಿ
ಪಾಠ ವಾಪ್ಸಿ ಎನ್ನುವಂಥ ಬೆಳವಣಿಗೆಗೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಸಾಹಿತಿ ದೇವನೂರ ಮಹಾದೇವ ಅವರು ತಮ್ಮ ಪಾಠವನ್ನು ಹಿಂಪಡೆಯುವ ಇಂಗಿತ ವ್ಯಕ್ತಪಡಿಸಿದ್ದಲ್ಲದೆ ಅನುಮತಿ ಕೂಡ ನಿರಾಕರಿಸಿದ್ದಾರೆ. ಹತ್ತನೇ ತರಗತಿಯ ಕನ್ನಡ ಪಠ್ಯದಲ್ಲಿ ನನ್ನದೊಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಸೇರಿಸಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದಿರುವ ಅವರು ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ್ದ ಅನುಮತಿ ಕೂಡ ಹಿಂಪಡೆದಿದ್ದೇನೆ ಎಂದಿದ್ದಾರೆ.

ಡಾ.ಜಿ. ರಾಮಕೃಷ್ಣ ಎಂಬವರು ಈ ಬಗ್ಗೆ ದನಿ ಎತ್ತಿದ್ದು, ತಮ್ಮ ಯಾವುದೇ ಬರಹವನ್ನು ಪಠ್ಯದಲ್ಲಿ ಅಳವಡಿಸಬೇಡಿ ಎಂದಿದ್ದಾರೆ. ಇದರೊಂದಿಗೆ ಯಾವುದಾದರೂ ಬರಹ ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ತಮ್ಮ ಅನುಮತಿ ಇರುವುದಿಲ್ಲ ಎಂದೂ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...