Monday, February 2, 2026
Monday, February 2, 2026

ಇಬ್ರಾಹಿಂ ಹೇಳಿಕೆಗೆ ಮಂಜಮ್ಮ ಜೋಗತಿ ಬೇಸರ

Date:

ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರ ಅಲ್ಲ. ಮಂಗಳಮುಖಿ ಸರ್ಕಾರ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಆದಷ್ಟು ಬೇಗ ಈ ಮಂಗಳಮುಖಿ ಸರ್ಕಾರದಿಂದ ಮುಕ್ತಿಪಡೆಯೋಣ. ಇವರ ಜೊತೆ ಜಗಳ ಆಡುವುದಕ್ಕೂ ಆಗಲ್ಲ. ಗಂಡಸರಾದರೆ ಗಂಡಸರನ್ನು ಕಳುಹಿಸಬಹುದು. ಹೆಂಗಸರಾದರೆ ಹೆಂಗಸರನ್ನು ಕಳುಹಿಸಬಹುದು. ಇದು ಗಂಡಸೂ ಅಲ್ಲ ಹೆಂಗಸೂ ಅಲ್ಲ, ಕೈ ತಟ್ಟುತ್ತಾರೆ. ನಾವು ಹಿಂದೆ ಸರಿಯಬೇಕಾಗುತ್ತದೆ. ಎಷ್ಟು ಬೈದರೂ ಎಷ್ಟು ಉಗಿದರೂ ಹ್ಹಿ ಹ್ಹಿ ಹ್ಹೀ ಅಂತಾರೆ ಎಂದು ಸಿ.ಎಂ. ಇಬ್ರಾಹಿಂ ಅವರು ರಾಯಚೂರಿನ ಮುದಗಲ್‌ನಲ್ಲಿ ಇತ್ತೀಚೆಗಷ್ಟೇ ಹೇಳಿದ್ದರು.

ಈ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಇಬ್ರಾಹಿಂ ಹೇಳಿಕೆಯ ವರದಿಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ನನ್ನ ತಂದೆ ಕೂಡ ಹೀಗೆ ಹೇಳಿದ್ದರು. ಗಂಡಾಗಿದ್ದರೆ ಕೆಲಸ ಕೊಡಿಸುತ್ತಿದ್ದೆ, ಹೆಣ್ಣಾಗಿದ್ದರೆ ಮದುವೆ ಮಾಡಿಸುತ್ತಿದ್ದೆ. ಕುರುಡ ಕುಂಟ ಆಗಿದ್ದರೆ ಮನೆಯಲ್ಲೇ ಇರಿಸಿಕೊಂಡು ಊಟ ಹಾಕುತ್ತಿದ್ದೆ.

ನಾನು ಮಂಗಳಮುಖಿ, ಕಲಾವಿದೆ, ಕನ್ನಡತಿ. ಸಮಾಜ ಗೌರವಿಸುತ್ತಿದೆ ನಮ್ಮನ್ನು. ಹೀಗೆ ಅವಮಾನ ಮಾಡಬಾರದಿತ್ತು ಸರ್. ನಿಮ್ಮ ರಾಜಕೀಯಕ್ಕೆ ನೀವು ಕೈ ತಟ್ಟಿದ್ದೀರಿ ಇವತ್ತು ಎಂದು ಟ್ವೀಟ್ ನಲ್ಲಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...