Thursday, March 19, 2026
Thursday, March 19, 2026

ಇಬ್ರಾಹಿಂ ಹೇಳಿಕೆಗೆ ಮಂಜಮ್ಮ ಜೋಗತಿ ಬೇಸರ

Date:

ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರ ಅಲ್ಲ. ಮಂಗಳಮುಖಿ ಸರ್ಕಾರ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದರೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಆದಷ್ಟು ಬೇಗ ಈ ಮಂಗಳಮುಖಿ ಸರ್ಕಾರದಿಂದ ಮುಕ್ತಿಪಡೆಯೋಣ. ಇವರ ಜೊತೆ ಜಗಳ ಆಡುವುದಕ್ಕೂ ಆಗಲ್ಲ. ಗಂಡಸರಾದರೆ ಗಂಡಸರನ್ನು ಕಳುಹಿಸಬಹುದು. ಹೆಂಗಸರಾದರೆ ಹೆಂಗಸರನ್ನು ಕಳುಹಿಸಬಹುದು. ಇದು ಗಂಡಸೂ ಅಲ್ಲ ಹೆಂಗಸೂ ಅಲ್ಲ, ಕೈ ತಟ್ಟುತ್ತಾರೆ. ನಾವು ಹಿಂದೆ ಸರಿಯಬೇಕಾಗುತ್ತದೆ. ಎಷ್ಟು ಬೈದರೂ ಎಷ್ಟು ಉಗಿದರೂ ಹ್ಹಿ ಹ್ಹಿ ಹ್ಹೀ ಅಂತಾರೆ ಎಂದು ಸಿ.ಎಂ. ಇಬ್ರಾಹಿಂ ಅವರು ರಾಯಚೂರಿನ ಮುದಗಲ್‌ನಲ್ಲಿ ಇತ್ತೀಚೆಗಷ್ಟೇ ಹೇಳಿದ್ದರು.

ಈ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಬಿ. ಮಂಜಮ್ಮ ಜೋಗತಿ ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಇಬ್ರಾಹಿಂ ಹೇಳಿಕೆಯ ವರದಿಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ನನ್ನ ತಂದೆ ಕೂಡ ಹೀಗೆ ಹೇಳಿದ್ದರು. ಗಂಡಾಗಿದ್ದರೆ ಕೆಲಸ ಕೊಡಿಸುತ್ತಿದ್ದೆ, ಹೆಣ್ಣಾಗಿದ್ದರೆ ಮದುವೆ ಮಾಡಿಸುತ್ತಿದ್ದೆ. ಕುರುಡ ಕುಂಟ ಆಗಿದ್ದರೆ ಮನೆಯಲ್ಲೇ ಇರಿಸಿಕೊಂಡು ಊಟ ಹಾಕುತ್ತಿದ್ದೆ.

ನಾನು ಮಂಗಳಮುಖಿ, ಕಲಾವಿದೆ, ಕನ್ನಡತಿ. ಸಮಾಜ ಗೌರವಿಸುತ್ತಿದೆ ನಮ್ಮನ್ನು. ಹೀಗೆ ಅವಮಾನ ಮಾಡಬಾರದಿತ್ತು ಸರ್. ನಿಮ್ಮ ರಾಜಕೀಯಕ್ಕೆ ನೀವು ಕೈ ತಟ್ಟಿದ್ದೀರಿ ಇವತ್ತು ಎಂದು ಟ್ವೀಟ್ ನಲ್ಲಿ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...