Monday, May 4, 2026
Monday, May 4, 2026

ಇಂಡೋ-ಪೆಸಿಫಿಕ್ ಆರ್ಥಿಕ ವೇದಿಕೆ ರಚನೆ ಬಗ್ಗೆ ಚೀನಾ ವ್ಯಂಗ್ಯ ಪ್ರತಿಕ್ರಿಯೆ

Date:

ಆರ್ಥಿಕ ಸಹಕಾರಕ್ಕಾಗಿ ಭಾರತ ಸೇರಿದಂತೆ 13 ದೇಶಗಳು ಮಾಡಿಕೊಂಡಿದ್ದ ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್‌ ಆರ್ಥಿಕ ವೇದಿಕೆ (ಐಪಿಇಎಫ್‌)ನ್ನು ಚೀನಾ ವಿರೋಧಿಸಿದೆ.

ಇಂಡೋ ಪೆಸಿಫಿಕ್‌ ವಲಯದಲ್ಲಿ ತನ್ನ ಪ್ರಾಬಲ್ಯಕ್ಕೆ ಎದುರಾದ ಅಪಾಯ ಎಂದು ಭಾವಿಸಿರುವ ಚೀನಾ ಇದನ್ನು ‘ಆರ್ಥಿಕ ನ್ಯಾಟೋ’ ಎಂದು ಕರೆದಿದೆ.

ಏಷ್ಯಾ ಪೆಸಿಫಿಕ್‌ ಎಂಬುದು ಚೀನಾ ನೆಲೆಗೊಂಡಿರುವ, ಅಭಿವೃದ್ಧಿ ಹೊಂದುತ್ತಿರುವ ಪ್ರದೇಶವಾಗಿದೆ. ಈ ವಲಯಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ರಕ್ಷಿಸಬೇಕು. ಜಾಗತಿಕ ಭದ್ರತೆಯನ್ನು ಹೆಚ್ಚು ಮಾಡಲು ಏಷ್ಯಾ-ಪೆಸಿಫಿಕ್‌ ರಾಷ್ಟ್ರಗಳೊಂದಿಗೆ ಸಹಕಾರ ಮಾತುಕತೆಯಾಡಲು ಚೀನಾ ಸಿದ್ಧವಾಗಿದೆ’ ಎಂದು ವಿದೇಶಾಂಗ ಸಚಿವ ವಾಂಗ್‌ ಯಿ ಹೇಳಿದ್ದಾರೆ.

ಭಾರತದಲ್ಲಿ ರಕ್ಷಣಾ ಉತ್ಪಾದನೆ, ಕೌಶಲ್ಯ ಅಭಿವೃದ್ಧಿ, ವ್ಯಾಪಾರ ಮತ್ತು ತಂತ್ರಜ್ಞಾನ ಪಾಲುದಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಭಯ ದೇಶಗಳು ತಮ್ಮ ಸಹಕಾರವನ್ನು ಮುಂದುವರೆಸುವ ಕುರಿತಾಗಿ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾತ್ರಾ ಹೇಳಿದರು.

ಈ ಒಪ್ಪಂದ ಮಾಡಿಕೊಂಡ ದಿನವೇ ಚೀನಾ ಇಂಡೋ-ಪೆಸಿಫಿಕ್‌ ಪ್ರದೇಶಕ್ಕೆ ಹೊಸ ಯೋಜನೆ ಮತ್ತು ಹೂಡಿಕೆ, ಹೆಚ್ಚಿನ ಸಹಕಾರವನ್ನು ಘೋಷಿಸಿದೆ.

ರಕ್ಷಣೆ, ವ್ಯಾಪಾರ, ತಂತ್ರಜ್ಞಾನದಲ್ಲಿ ಸಹಕಾರ: ಭಾರತ-ಜಪಾನ್‌ ಸಮ್ಮತಿ
ರಕ್ಷಣಾ ಉಪಕರಣಗಳ ಉತ್ಪಾದನೆ, ವ್ಯಾಪಾರ ಮತ್ತು ತಂತ್ರಜ್ಞಾನದಲ್ಲಿ ಉಭಯ ದೇಶಗಳ ಸಹಕಾರವನ್ನು ಮುಂದುವರೆಸುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್‌ ಪ್ರಧಾನಿ ಫುಮಿಯೋ ಕಿಶಿದಾ ಮಂಗಳವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಚರ್ಚೆ ಯಶಸ್ವಿಯಾಗಿದೆ.
ಕ್ವಾಡ್‌ ಸಭೆಯಲ್ಲಿ ಭಾಗವಹಿಸಲು ಜಪಾನ್‌ ಪ್ರವಾಸದಲ್ಲಿರುವ ಮೋದಿ, ಕಿಶಿದಾ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ವಿನಿಮಯ ಚಲನೆಯನ್ನು ಕಾಯ್ದುಕೊಳ್ಳಬೇಕಾದ ಮಹತ್ವವನ್ನು ಒತ್ತಿ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...