Wednesday, January 21, 2026
Wednesday, January 21, 2026

ಆಕಾಶವಾಣಿಯಲ್ಲಿ ಸಾಂದರ್ಭಿಕ ಸುದ್ದಿ ಸಂಪಾದಕ & ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

Date:

ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು-ಅನುವಾದಕಾರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು. ಪದವಿ ಅಥವಾ ಪತ್ರಿಕೋದ್ಯಮ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಟ 1 ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಪಡೆದಿರಬೇಕು ಅಥವಾ ಮುದ್ರಣ/ವಿದ್ಯುನ್ಮಾನ ಮಾಧ್ಯಮದಲ್ಲಿ ವರದಿಗಾರಿಕೆ/ಸಂಪಾದಕತ್ವ ಕೆಲಸದಲ್ಲಿ 5 ವರ್ಷ ಅನುಭವವಿರಬೇಕು.

ಕಂಪ್ಯೂಟರ್ ಅಪ್ಲಿಕೇಷನ್ ಪ್ರಾಥಮಿಕ ತಿಳುವಳಿಕೆ, ಕನ್ನಡ ಭಾಷೆಯಲ್ಲಿ ಪ್ರಾವಿಣ್ಯತೆ ಇದ್ದು, ವಯಸ್ಸು 21 ರಿಂದ 50 ವರ್ಷದೊಳಗಿರಬೇಕು.

ಸಾಂಧರ್ಭಿಕ ಸುದ್ದಿ ವಾಚಕರು-ಅನುವಾದಕಾರರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು.
ಕನ್ನಡ ಭಾಷೆಯಲ್ಲಿ ಪ್ರಾವಿಣ್ಯತೆ ಇರಬೇಕು ಹಾಗೂ ಪ್ರಸಾರಕ್ಕೆ ಯೋಗ್ಯವಾದ ಉತ್ತಮ ಗುಣಮಟ್ಟದ ಧ್ವನಿ ಹೊಂದಿರಬೇಕು. ರೇಡಿಯೋ/ಟಿವಿ ಸುದ್ದಿಮಾಧ್ಯಮ ಕೆಲಸ ಅನುಭವ, ಕಂಪ್ಯೂಟರ್ ಅಪ್ಲಿಕೇಷನ್ ಪ್ರಾಥಮಿಕ ತಿಳುವಳಿಕೆ ಇದ್ದು 21 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು.

ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ ರೂ.300, ಎಸ್‍ಸಿ/ಎಸ್‍ಟಿ/ಓಬಿಸಿ ರೂ.225 ಇದ್ದು The Station Director, All India Radio, Bengaluru ಇವರ ಹೆಸರಿನಲ್ಲಿ ಬ್ಯಾಂಕ್ ಡ್ರಾಫ್ಟ್ ಮೂಲಕ ಪಾವತಿಸಬೇಕು. ಹಾಗೂ ಅಭ್ಯರ್ಥಿಯ ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಹಾಗೂ ಅರ್ಜಿ ಶುಲ್ಕದ ಬ್ಯಾಂಕ್ ಡ್ರಾಫ್ಟ್‍ನ್ನು ಒಳಗೊಂಡ ಅರ್ಜಿಗಳನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಖುದ್ದಾಗಿ ಜೂನ್ 10 ರೊಳಗೆ ತಲುಪುವಂತೆ ದಿ ಡೆಪ್ಯುಟಿ ಜನರಲ್, (ಇ) & ಹೆಚ್‍ಓಓ,Attn: ರೀಜನಲ್ ನ್ಯೂಸ್ ಯುನಿಟ್, ಆಲ್ ಇಂಡಿಯಾ ರೇಡಿಯೋ, ರಾಜ್‍ಭವನ್ ರಸ್ತೆ, ಬೆಂಗಳೂರು 560001 ವಿಳಾಸಕ್ಕೆ ಕಳುಹಿಸಿಕೊಡಬೇಕು.

ಹೆಚ್ಚಿನ ವಿವರಗಳಿಗೆ ದೂ.ಸಂ 8317466729/9448159726/9482169168/080-22356344/22373000 ನ್ನು ಸಂಪರ್ಕಿಸಬಹುದೆಂದು ಪ್ರಸಾರ ಭಾರತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...