Sunday, December 14, 2025
Sunday, December 14, 2025

ಸರ್ಕಾರದ ವಿರುದ್ಧ ಲಾಂಗ್ ಮಾರ್ಚ್ ಹೊರಟ ಇಮ್ರಾನ್ ಬಂಧನಕ್ಕೆ ಶಾರ್ಟ್ ಕಟ್ ಕ್ರಮ

Date:

ಪಾಕಿಸ್ತಾನದ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿಯಲ್ಲಿ ಸೋಲುಂಡ ಬಳಿಕ ಮಾಜಿ ಪ್ರಧಾನಿ ಇಮ್ರಾನ್ ಖಾನ್, ನೂತನ ಸರಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ನೂತನ ಪ್ರಧಾನಿ ಶಹಬಾಜ್ ಷರೀಫ್ ನೇತೃತ್ವದ ಸರಕಾರವನ್ನು ಇಂಪೋರ್ಟೆಡ್ ಸರಕಾರ ಎಂದು ಜರಿಯುತ್ತಿರುವ ಇಮ್ರಾನ್ ಖಾನ್, ತನ್ನ ಸೋಲಿಗೆ ಅಮೆರಿಕದ ಕೈವಾಡವೇ ಕಾರಣ ಎಂದು ಆರೋಪಿಸಿದ್ದಾರೆ.

ಗುಪ್ತಚರ ಸಂಸ್ಥೆಗಳ ಮಾಹಿತಿಯ ಪ್ರಕಾರ, ಪಿಟಿಐ ಕಾರ್ಯಕರ್ತರು ಕಾನೂನು ಜಾರಿ ಸಂಸ್ಥೆಗಳಿಂದ ಯಾವುದೇ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ಮುಖಾಮುಖಿ ಆಗುವ ಸಾಧ್ಯತೆ ಇದೆ ಎಂಬುದು ಸರ್ಕಾರಿ ಸಂಸ್ಥೆಗಳಿಗೆ ಚೆನ್ನಾಗಿ ತಿಳಿದಿದೆ. ಅದನ್ನು ತಪ್ಪಿಸಲು ಕಷ್ಟವಾಗಲಿದೆ ಎಂಬ ವಿಚಾರವನ್ನು ಅಧಿಕಾರಿಗಳು ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಸರಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿರುವ ಇಮ್ರಾನ್ ಖಾನ್, ಲಾಂಗ್ ಮಾರ್ಚ್ ಪ್ರಾರಂಭ ಮಾಡಿದ್ದಾರೆ. ಈ ರಾಲಿಯಲ್ಲಿ ಭಾಗವಹಿಸಲು ಪೇಶಾವರದಿಂದ ಇಸ್ಲಾಮಾಬಾದ್‌ಗೆ ತೆರಳುತ್ತಿರುವ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ ಖಾನ್ ಮತ್ತು ಪಕ್ಷದ ಇತರ ಪ್ರಮುಖ ನಾಯಕರನ್ನು ಬಂಧಿಸಲು ಪಾಕಿಸ್ತಾನ ಸರಕಾರ ನಿರ್ಧರಿಸಿದೆ.

ಮೂಲಗಳ ಪ್ರಕಾರ, ಲಾಂಗ್ ಮಾರ್ಚ್‌ನಲ್ಲಿ ಅವರನ್ನು ಬಂಧಿಸುವುದು ಅಸಾಧ್ಯವಾದ ಕೆಲಸವೆಂದು ತೋರುತ್ತಿರುವಾಗ ಸಂಭವನೀಯ ಹಿಂಸಾಚಾರವನ್ನು ತಡೆಯಲು ಅವರನ್ನು ಬಂಧಿಸುವುದನ್ನು ಬಿಟ್ಟು ಸರ್ಕಾರಕ್ಕೆ ಬೇರೆ ದಾರಿಯಿಲ್ಲ ಎಂಬ ಅಭಿಪ್ರಾಯವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...