Tuesday, August 25, 2026
Tuesday, August 25, 2026

ಪುತ್ರನಿಗೆ ಟಿಕೆಟ್ ನಿರಾಕರಣೆ ಸಮಾಧಾನದ ಪ್ರತಿಕ್ರಿಯೆ

Date:

ವಿಧಾನಪರಿಷತ್ ಚುನಾವಣೆಗೆ ತಮ್ಮ ಪುತ್ರನಿಗೆ ಟಿಕೆಟ್ ತಪ್ಪಿರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ. ಪಕ್ಷ ಸೂಕ್ತ ಸಂದರ್ಭದಲ್ಲಿ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆಲ್ಲ ಪಕ್ಷ ಗುರುತಿಸಿ ಟಿಕೆಟ್ ನೀಡಿದಿಯೋ ಅವರಿಗೆ ನಮ್ಮ ಸಹಮತವಿದೆ. ಯಾವುದೇ ವಿರೋಧವಿಲ್ಲ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.

ಈಗಾಗಲೇ, ಪಕ್ಷ ವಿಜಯೇಂದ್ರ ಕಾರ್ಯ ಗುರುತಿಸಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಂತರ ಉಪಾಧ್ಯಕ್ಷ ಸ್ಥಾನ ನೀಡಿದೆ. ಮುಂದೆಯೂ ಗುರುತಿಸಲಿದೆ. ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತಿದ್ದಾರೆ. ಟಿಕೆಟ್ ತಪ್ಪಿದ್ದರ ಬಗ್ಗೆ ಅಸಮಾಧಾನವಿಲ್ಲ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಯಾರು ಸಹ ಅಸಮಾಧಾನ ಹೊರಹಾಕಬಾರದು. ಯಾವುದೇ ರೀತಿಯ ಗೊಂದಲ ಸೃಷ್ಟಿಸಬಾರದು. ಪಕ್ಷದ ವರಿಷ್ಠರು ನೀಡಿದ ತೀರ್ಮಾನಕ್ಕೆ ಬದ್ದರಾಗಿ ಕೆಲಸ ಮಾಡೋಣ ಎಂದರು. 2023ರಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಸಂಘಟನೆ ಸೇರಿದಂತೆ ಮತ್ತಿತರರ ಕಾರ್ಯದಲ್ಲಿ ತೊಡಗುವುದು ನಮ್ಮ ಮೊದಲ ಆದ್ಯತೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...