Tuesday, August 25, 2026
Tuesday, August 25, 2026

ದೌರ್ಜನ್ಯದಿಂದ ಮೃತಪಟ್ಟ ಎಸ್.ಸಿ, ಎಸ್.ಟಿ ಕುಟುಂಬಕ್ಕೆ ಅನುಕಂಪ ನೌಕರಿಗೆ ಆದೇಶ

Date:

ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ಕೆಲವು ದಿನಗಳ ಹಿಂದೆ ದೌರ್ಜನ್ಯಕ್ಕೆ ಒಳಗಾಗಿ ಮೃತಪಟ್ಟಂತ ಪರಿಶಿಷ್ಟ ಜಾತಿ, ವರ್ಗದ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಪ್ರಸ್ತುತ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶವನ್ನು ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳು 1999ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲಾಗಿದೆ.

ಈ ತಿದ್ದುಪಡಿ ನಿಯಮದಂತೆ ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ, ವರ್ಗಕ್ಕೆ ಸೇರಿದ ಮೃತ ಕುಟುಂಬಸ್ಥರಿಗೆ ಅನುಕಂಪದ ಆಧಾರದ ನೌಕರಿಯನ್ನು ನೀಡಲಾಗುತ್ತದೆ. ವ್ಯಕ್ತಿ ಮರಣ ಹೊಂದಿದ ದಿನಾಂಕದಿಂದ 3 ವರ್ಷದ ಒಳಗೆ 18 ವರ್ಷಗಳನ್ನು ಪೂರೈಸಿರುವಂತಹ ಮತ್ತು ತದನಂತರ 2 ವರ್ಷಗಳೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಮೂಲಗಳು ಮಾಹಿತಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...