Thursday, February 5, 2026
Thursday, February 5, 2026

ಯುದ್ಧ ನಿಲ್ಲಿಸಲು ಯಾರದೇ ಮಧ್ಯಸ್ಥಿಕೆ ಇಲ್ಲದೇ ನೇರ ಮಾತುಕತೆಗೆ ಸಿದ್ಧ- ಝೆಲೆನ್ಸ್ಕಿ

Date:

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಧ್ಯವರ್ತಿಗಳ ಬದಲು ನೇರವಾಗಿ ಮಾತನಾಡಲು ಸಿದ್ದನಿದ್ದೇನೆ ಎಂದು ತಿಳಿಸಿದ್ದಾರೆ.

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ವೇದಿಕೆಯಲ್ಲಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.
ಇದಕ್ಕೂ ಮೊದಲು ರಷ್ಯಾದೊಂದಿಗೆ ಮಧ್ಯವರ್ತಿಗಳ ಮೂಲಕ ಮಾತುಕತೆ ನಡೆಸಿ ಯುದ್ಧವನ್ನು ನಿಲ್ಲಿಸುವ ಬಗ್ಗೆ ಚರ್ಚಿಸಲು ಝೆಲೆನ್ಸ್ಕಿ ಮುಂದಾಗಿದ್ದರು. ಆದರೆ ರಷ್ಯಾ ಅಧ್ಯಕ್ಷ ಇದಾವುದಕ್ಕೂ ಬಗ್ಗುವುದಿಲ್ಲ ಎಂಬುದು ಖಾತ್ರಿಯಾಗಿರುವುದರಿಂದ ಉಕ್ರೇನ್ ಅಧ್ಯಕ್ಷ ನೇರ ಮಾತುಕತೆ ನಡೆಸಲು ಸಿದ್ದರಿದ್ದಾರೆ ಎಂದಿದ್ದಾರೆ.

ಉಕ್ರೇನ್‌ನ ಎಲ್ಲಾ ಪ್ರದೇಶಗಳು ಯುದ್ಧದ ಪರಿಣಾಮದಿಂದ ಚೇತರಿಸಿಕೊಳ್ಳುವವರೆಗೂ ಹೋರಾಡಲಿದೆ. ಇದು ಮಾತುಕತೆಯ ಮೊದಲ ಹೆಜ್ಜೆಯಾಗಬಹುದು ಎಂದು ಹೇಳಿದರು.

ಕಳೆದ ವಾರ ಝೆಲೆನ್ಸ್ಕಿ ರಾಜತಾಂತ್ರಿಕತೆ ಇಲ್ಲದೇ ಯುದ್ಧವನ್ನು ನಿಲ್ಲಿಸುವುದು ಅಸಾಧ್ಯ ಎಂದು ತಿಳಿಸಿದ್ದರು. ಉಕ್ರೇನ್‌ನ 2ನೇ ಮುಖ್ಯ ನಗರವಾದ ಖಾರ್ಕೀವ್‌ನಲ್ಲಿ ನಮ್ಮ ಪಡೆ ರಷ್ಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತಿದೆ.

ಆದರೆ ಡಾನ್ಬಾಸ್ ನಗರದಲ್ಲಿ ರಕ್ತಸಿಕ್ತ ಪರಿಸ್ಥಿತಿ ಉಂಟಾಗಿದೆ. ಅಲ್ಲಿ ನಮ್ಮ ಹಲವು ನಾಗರಿಕರನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...