Sunday, December 14, 2025
Sunday, December 14, 2025

ಟಾಟಾ ಐಪಿಎಲ್22 ರಜತ್ ಶತಕ: ಆರ್ಸಿಬಿ 2 ನೇ ಅರ್ಹತಾ ಪಂದ್ಯಕ್ಕೆ ಮುನ್ನಡೆ

Date:

ಐಪಿಎಲ್ 2022 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.

ಇದರೊಂದಿಗೆ ಲಖನೌ ಸೂಪರ್ ಜೈಂಟ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಆರ್‌ಸಿಬಿ ನೀಡಿದ ಬೃಹತ್ ಮೊತ್ತದ ಮುಂದೆ ಲಖನೌ ನಾಯಕ ಕೆಎಲ್ ರಾಹುಲ್ ನಡೆಸಿದ ಹೋರಾಟ ವ್ಯರ್ಥವಾಯಿತು.

ನಾಯಕ ಕೆಎಲ್ ರಾಹುಲ್ ಹಾಗೂ ಮನನ್ ವೋಹ್ರಾ ತಂಡಕ್ಕೆ ಚೇತರಿಕೆ ನೀಡುವ ಪ್ರಯತ್ನ ಮಾಡಿದರು. ಆದರೆ ಇವರ ಜೊತೆಯಾಟ ಗಟ್ಟಿಯಾಗಿ ನೆಲೆಯೂರಲು ಆರ್‌ಸಿಬಿ ಅವಕಾಶ ನೀಡಲಿಲ್ಲ. ವೋಹ್ರಾ 19 ರನ್ ಸಿಡಿಸಿ ಔಟಾದರು. 41 ರನ್‌ಗಳಿಗೆ ಲಖನೌ ಪ್ರಮುಖ 2 ವಿಕೆಟ್ ಕಳೆದುಕೊಂಡಿತು.
ಕೆಎಲ್ ರಾಹುಲ್ ಹಾಗೂ ದೀಪಕ್ ಹೂಡ ಸ್ಫೋಟಕ ಬ್ಯಾಟಿಂಗ್ ಲಖನೌ ತಂಡದಲ್ಲಿ ಗೆಲುವಿನ ಆಸೆ ಚಿಗುರಿಸಿತ್ತು. ಆದರೆ ಹೂಡ 26 ಎಸೆತದಲ್ಲಿ 45 ರನ್ ಸಿಡಿಸಿ ಔಟಾದರು ಇತ್ತ ಹೋರಾಟ ಮುಂದುವರಿಸಿದ ಕೆಎಲ್ ರಾಹುಲ್ 79 ರನ್ ಸಿಡಿಸಿ ಔಟಾದರು.

ರಜತ್ ಪಾಟಿದಾರ್ ಸ್ಫೋಟಕ ಶತಕದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 207 ರನ್ ಸಿಡಿಸಿತ್ತು. 208 ರನ್ ಟಾರ್ಗೆಟ್ ಪಡೆದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಬ್ಯಾಟಿಂಗ್‌ನಲ್ಲೂ ಸಂಕಷ್ಟ ಎದುರಾಯಿತು. ಆರಂಭದಲ್ಲೇ ಕ್ವಿಂಟನ್ ಡಿಕಾಕ್ ವಿಕೆಟ್ ಕಳೆದುಕೊಂಡಿತು. ಡಿಕಾಕ್ 6 ರನ್ ಸಿಡಿಸಿ ಔಟಾದರು.

14 ರನ್ ಗೆಲುವು ದಾಖಲಿಸಿದ ಆರ್‌ಸಿಬಿ 2ನೇ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದಿದೆ.
ಮೇ.27 ರಂದು ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್‌ಸಿಬಿ, ರಾಜಸ್ಥಾನ ರಾಯಲ್ಸ್ ವಿರುದ್ಧ ಹೋರಾಟ ನಡೆಸಲಿದೆ. ಇತ್ತ ಎಲಿಮಿನೇಟರ್ ಪಂದ್ಯ ಸೋತ ಲಖನೌ ಸೂಪರ್ ಜೈಂಟ್ಸ್ ಟೂರ್ನಿಯಿಂದ ನಿರ್ಗಮಿಸಿದೆ.

ಆರ್‌ಸಿಬಿ ಇನ್ನಿಂಗ್ಸ್
ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಪ್ರಮುಖವಾಗಿ ರಜತ್ ಪಾಟಿದಾರ್ ಭರ್ಜರಿ ಶತಕ ತಂಡದ ಬೃಹತ್ ಮೊತ್ತಕ್ಕೆ ನೆರವಾಯಿತು. ರಜತ್ ಪಾಟಿದಾರ್ 49 ಎಸೆತದಲ್ಲಿ ಶತಕ ಪೂರೈಸಿದರು. ಒಟ್ಟು 54 ಎಸೆತ ಎದುರಿಸಿದ ರಜತ್ ಪಾಟಿದಾರ್ ಅಜೇಯ 112 ರನ್ ಸಿಡಿಸಿದರು. 12 ಬೌಂಡರಿ ಹಾಗೂ 7 ಸಿಕ್ಸರ್ ಸಿಡಿಸಿದರು.

ಕೊಹ್ಲಿ 25 ರನ್, ನಾಯಕ ಫಾಫ್ ಡುಪ್ಲೆಸಿಸ್ ಶೂನ್ಯ, ಗ್ಲೆನ್ ಮ್ಯಾಕ್ಸ್‌ವೆಲ್ 9 ರನ್ ಹಾಗೂ ಮಹಿಪಾಲ್ ಲೊಮ್ರೊರ್ 14 ರನ್ ಸಿಡಿಸಿದರು. ಇದರೊಂದಿಗೆ ಆರ್‌ಸಿಬಿ 4 ವಿಕೆಟ್ ನಷ್ಟಕ್ಕೆ 207 ರನ್ ಸಿಡಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...