Wednesday, March 25, 2026
Wednesday, March 25, 2026

ಜಾನುವಾರುಗಳ ನಿಗೂಢ ಕಾಯಿಲೆಗಳ ಬಗ್ಗೆ ವೈದ್ಯರಿಗೆ ಕಾರ್ಯಾಗಾರ

Date:

ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಜಾನುವಾರು ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರದಿಂದ ಪಶುವೈದ್ಯರಿಗೆ ಎರಡು ದಿನಗಳ ಕಾರ್ಯಾಗಾರ ನಡೆಯಲಿದೆ.

ಜಾನುವಾರುಗಳ ನಿಗೂಢ ಕಾಯಿಲೆಗಳ ಸಂಶೋಧನಾ ಕೇಂದ್ರ, ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣ, ಶಿವಮೊಗ್ಗ ಇಲ್ಲಿ 2 ದಿನಗಳ “ಜಾನುವಾರುಗಳ ರೋಗ ಪತ್ತೆ ಮತ್ತು ಚಿಕಿತ್ಸೆಯಲ್ಲಿ ಇತ್ತೀಚಿನ ಆವಿಷ್ಕಾರಗಳು” ಎಂಬ ಶಿರ್ಷಿಕೆಯ ತಾಂತ್ರಿಕ ಕಾರ್ಯಾಗಾರವನ್ನು ದಿನಾಂಕ 26-27 ಮೇ 2022 ರಂದು ಏರ್ಪಡಿಸಿದ್ದು, ಇದರಲ್ಲಿ ಜಾನುವಾರುಗಳಿಗೆ ಬರುವ ವಿವಿಧ ಕಾಯಿಲೆಗಳ ರೋಗ ಪತ್ತೆ ವಿಧಾನದ ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳ ಸಮೇತ ತರಬೇತಿಯನ್ನು ವಿಷಯ ತಜ್ಞರಿಂದ ಒದಗಿಸಲಾಯಿತು. ಈ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ 35 ಪಶುವೈದ್ಯರು ಭಾಗವಹಿಸಿದ್ದು ಕ್ಷೇತ್ರ ಮಟ್ಟದ ಪಶುವೈದ್ಯರ ಜ್ಞಾನ ಹೆಚ್ಚಿಸುವುದರಲ್ಲಿ ಇದು ಸಹಕಾರಿಯಾಗಲಿದೆ ಎಂದು ಪ್ರಧಾನ ಸಂಶೋಧಕರು ಮತ್ತು ಮುಖ್ಯಸ್ಥರಾಗಿರುವ ಡಾ: ಎನ್.ಬಿ.ಶ್ರೀಧರ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ: ಮಹೇಶ್ವರಪ್ಪ,ನಿವೃತ್ತ ಉಪನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾತಕ ಸರ್ಕಾರ ಇವರು ಭಾಗವಹಿಸಿ, ಕ್ಷೇತ್ರ ಮಟ್ಟದಲ್ಲಿರುವ ಪಶುವೈದ್ಯರು ರೈತರ ಒಳಿತಿಗಾಗಿ ಶ್ರಮಿಸಬೇಕೆಂದರು. ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದ ಪ್ರಭಾರಿ ಡೀನ್‌ರವರಾದ ಡಾ: ಜಯರಾಮು, ಜಿ ಎಂ ಇವರು ಮಾತನಾಡುತ್ತಾ ಪಶುಚಿಕಿತ್ಸೆಯಲ್ಲಿ ಔಷಧಗಳನ್ನು ಎಚ್ಚರಿಕೆಯೆಂದು ಬಳಸಬೇಕೆಂದು, ಮತ್ತು ಶಿಬಿರದ ಪ್ರಯೋಜನವನ್ನು ಎಲ್ಲರು ಪಡೆಯಬೇಕೆಂದು ಕರೆಯಿತ್ತರು.
ಡಾ: ನಿರಂಜನ ಕಾರ್ಯಕ್ರಮ ನಿರೂಪಿಸಿದರೆ, ಡಾ: ಸುನಿಲಚಂದ್ರ ವಂದನಾರ್ಪಣೆ ಮಾಡಿದರು. ಡಾ: ಕವಿತಾ ರಾಣಿ, ಡಾ: ಆನಂದ, ಡಾ: ಮಂಜುನಾಥ್, ಡಾ: ಮಂಜು, ಡಾ: ಮಾಲತೇಶ್, ಡಾ:ರವೀಂದ್ರ, ಡಾ:ಅರುಣ್, ಡಾ:ಅನಂತಕೃಷ್ಣ ಇವರು ವಿಷಯ ತಜ್ಞರು ಮತ್ತು ಸಂಪೂನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಡಾ:ಎನ್.ಬಿ.ಶ್ರೀಧರ
ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು
ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗ
ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...