Tuesday, April 22, 2025
Tuesday, April 22, 2025

ಪರಿವಾರವಾದಿಗಳ ಪಕ್ಷದಿಂದ ಸ್ವಾರ್ಥ ಸಾಧನೆ- ಮೋದೀಜಿ

Date:

ಕುಟುಂಬ ರಾಜಕಾರಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ಮುಂದುವರೆಸಿದ್ದಾರೆ.

ಪರಿವಾರವಾದಿ’ ಪಕ್ಷಗಳು ಕೇವಲ ರಾಜಕೀಯ ಸಮಸ್ಯೆಯಲ್ಲ, ಬದಲಾಗಿ ನಮ್ಮ ದೇಶದ ಪ್ರಜಾಪ್ರಭುತ್ವ ಮತ್ತು ಯುವಜನತೆಯ ದೊಡ್ಡ ಶತ್ರುವಾಗಿವೆ ಎಂದರು.

ಹೈದರಾಬಾದ್​ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,
21ನೇ ಶತಮಾನದ ಭಾರತವು ‘ಆತ್ಮನಿರ್ಭರ ಭಾರತ್’ ಮತ್ತು ‘ಮೇಕ್ ಇನ್ ಇಂಡಿಯಾ’ ಕನಸಿನೊಂದಿಗೆ ಮುನ್ನಡೆಯುತ್ತಿದೆ. ನಮ್ಮ ಸ್ಟಾರ್ಟ್‌ಅಪ್‌ಗಳು ಪ್ರಪಂಚದ ಮೇಲೆ ಪ್ರಭಾವ ಬೀರುತ್ತಿವೆ. ಇಂದು ನಾವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್‌ಅಪ್ ವ್ಯವಸ್ಥೆ ಹೊಂದಿದ್ದೇವೆ ಎಂದು ತಿಳಿಸಿದರು.

ಒಂದು ಕುಟುಂಬಕ್ಕೆ ಸಮರ್ಪಿತವಾಗಿರುವ ರಾಜಕೀಯ ಪಕ್ಷಗಳ ಮುಖವೇ ಭ್ರಷ್ಟಾಚಾರ ಎಂಬುದನ್ನು ನಮ್ಮ ದೇಶ ನೋಡಿದೆ. ‘ಪರಿವಾರವಾದಿ’ ಪಕ್ಷಗಳು ತಮ್ಮ ಅಭಿವೃದ್ಧಿಯ ಬಗ್ಗೆ ಮಾತ್ರ ಯೋಚಿಸುತ್ತವೆ. ಇಂತಹ ಪಕ್ಷಗಳು ಬಡವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಅಲ್ಲದೇ, ತಮ್ಮ ಕುಟುಂಬ ಮಾತ್ರವೇ ಹೇಗೆ ಅಧಿಕಾರದಲ್ಲಿ ಇರಬೇಕು ಮತ್ತು ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡಬಹುದು ಎಂಬುದರ ಮೇಲೆಯೇ ಅವರ ರಾಜಕೀಯ ಕೇಂದ್ರೀಕೃತ. ಅವರಿಗೆ ಜನರ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ ಎಂದು ತೆಲಂಗಾಣದ ಸಿಎಂ ಕೆಸಿಆರ್​ ಕುಟುಂಬದ ವಿರುದ್ಧ ಪರೋಕ್ಷವಾಗಿ ಮೋದಿ ವಾಗ್ದಾಳಿ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...