Sunday, April 27, 2025
Sunday, April 27, 2025

ಸರ್ಕಾರಿ ಸಿಬ್ಬಂದಿಗೆ ಷಾಕ್ ನೀಡುತ್ತಿರುವ ಪಂಜಾಬ್ ಸಿಎಂ ಮಾನ್

Date:

ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲು ಪಂಜಾಬ್ ಸರ್ಕಾರ ಮುಂದಾಗಿದೆ.

ಕೈದಿಗಳ ಬಳಿ ಮೊಬೈಲ್​ ಸೇರಿ ಯಾವುದೇ ವಸ್ತುಗಳು ಕಂಡ ಬಂದರೆ ಜೈಲಿನ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಇದರಲ್ಲಿ ಈಗ ಫರೀದ್‌ಕೋಟ್ ಜೈಲಿನ ಅಧೀಕ್ಷಕನ ತಲೆ ತಂಡವಾಗಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಆಮ್​ ಆದ್ಮಿ ಸರ್ಕಾರವು ಮಾರ್ಚ್ 16ರಿಂದ ಮೇ 10ರವರೆಗೆ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 710 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ನಡುವೆ ಫರೀದ್‌ಕೋಟ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಕೈದಿಯೊಬ್ಬನ ವಿಡಿಯೋ ವೈರಲ್​ ಆಗಿತ್ತು. ಹೀಗಾಗಿ ಜೈಲಿನ ಅಧೀಕ್ಷಕ ಜೋಗಿಂದರ್ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಸ್ವತಃ ಕಾರಾಗೃಹ ಸಚಿವ ಹರ್ಜೋತ್ ಬೈನ್ಸ್ ಟ್ವೀಟ್​ ಮಾಡಿದ್ದು, ‘ಈಗಾಗಲೇ ಆಪ್​ ಸರ್ಕಾರ ಜೈಲುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಲ್ಲಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಜೈಲಿನಲ್ಲಿ ಕೈದಿಯ ವಿಡಿಯೋ ವೈರಲ್ ಆದ ಪ್ರಕರಣ ಸಂಬಂಧ ಜೈಲ್ ಸೂಪರಿಂಟೆಂಡೆಂಟ್​ನ್ನು ಅಮಾನತುಗೊಳಿಸಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್​​ ಸಿಎಂ ಭಗವಂತ್ ಮಾನ್ ಅವರು ಕಮಿಷನ್​ ವಿಚಾರ ಸದ್ದು ಮಾಡ್ತಿದ್ದಂತೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಂಪುಟದಿಂದ ದಿಢೀರ್ ಕಿತ್ತಾಕಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...