Monday, February 16, 2026
Monday, February 16, 2026

ಸರ್ಕಾರಿ ಸಿಬ್ಬಂದಿಗೆ ಷಾಕ್ ನೀಡುತ್ತಿರುವ ಪಂಜಾಬ್ ಸಿಎಂ ಮಾನ್

Date:

ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲು ಪಂಜಾಬ್ ಸರ್ಕಾರ ಮುಂದಾಗಿದೆ.

ಕೈದಿಗಳ ಬಳಿ ಮೊಬೈಲ್​ ಸೇರಿ ಯಾವುದೇ ವಸ್ತುಗಳು ಕಂಡ ಬಂದರೆ ಜೈಲಿನ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಇದರಲ್ಲಿ ಈಗ ಫರೀದ್‌ಕೋಟ್ ಜೈಲಿನ ಅಧೀಕ್ಷಕನ ತಲೆ ತಂಡವಾಗಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಆಮ್​ ಆದ್ಮಿ ಸರ್ಕಾರವು ಮಾರ್ಚ್ 16ರಿಂದ ಮೇ 10ರವರೆಗೆ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 710 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ನಡುವೆ ಫರೀದ್‌ಕೋಟ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಕೈದಿಯೊಬ್ಬನ ವಿಡಿಯೋ ವೈರಲ್​ ಆಗಿತ್ತು. ಹೀಗಾಗಿ ಜೈಲಿನ ಅಧೀಕ್ಷಕ ಜೋಗಿಂದರ್ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಸ್ವತಃ ಕಾರಾಗೃಹ ಸಚಿವ ಹರ್ಜೋತ್ ಬೈನ್ಸ್ ಟ್ವೀಟ್​ ಮಾಡಿದ್ದು, ‘ಈಗಾಗಲೇ ಆಪ್​ ಸರ್ಕಾರ ಜೈಲುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಲ್ಲಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಜೈಲಿನಲ್ಲಿ ಕೈದಿಯ ವಿಡಿಯೋ ವೈರಲ್ ಆದ ಪ್ರಕರಣ ಸಂಬಂಧ ಜೈಲ್ ಸೂಪರಿಂಟೆಂಡೆಂಟ್​ನ್ನು ಅಮಾನತುಗೊಳಿಸಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್​​ ಸಿಎಂ ಭಗವಂತ್ ಮಾನ್ ಅವರು ಕಮಿಷನ್​ ವಿಚಾರ ಸದ್ದು ಮಾಡ್ತಿದ್ದಂತೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಂಪುಟದಿಂದ ದಿಢೀರ್ ಕಿತ್ತಾಕಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Navyashree Eeshwaravan Charitable Trust ಒಬ್ಬರ ಪ್ರಾಣವುಳಿಸಿದ ಪುಣ್ಯ ರಕ್ತದಾನದಿಂದ ಬರುತ್ತದೆ- ನವ್ಯಶ್ರೀ ನಾಗೇಶ್

ನೊಂದವರು, ಸಂಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ಪರಶಿವನ ಅನುಗ್ರಹ ಪಡೆಯಬಹುದು. ಮತ್ತೊಬ್ಬರ ಜೀವ...

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...