Friday, February 6, 2026
Friday, February 6, 2026

ಭಾರತದ ಇಮೇಜಿಗೆ ವಿದೇಶಗಳು ಮೆಚ್ಚುಗೆ ಸೂಸಿವೆ-ರಾಜ್ ನಾಥ್ ಸಿಂಗ್

Date:

ಇತ್ತೀಚೆಗೆ ಭಾರತದ ಚಿತ್ರಣ ಬದಲಾಗಿದ್ದು ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಇಂದು ಭಾರತದೊಂದಿಗೆ ಕೈಜೋಡಿಸಲು ಮುಂದಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ.

ಕಾರವಾರದ ಐಎನ್‌ಎಸ್‌ ಕದಂಬ ನೌಕಾನೆಲೆಗೆ ಆಗಮಿಸಿ ಮಾತನಾಡಿದ ಅವರು,
ಈ ಹಿಂದೆ ಭಾರತವನ್ನು ಗಂಭೀರವಾಗಿ ಪರಿಗಣಿಸದೆ ಇದ್ದವರೂ ಈಗ ಭಾರತದತ್ತ ಒಲವು ತೋರುತ್ತಿದ್ದಾರೆ. ಕಾಲ ಬದಲಾಗಿದೆ. ಭಾರತದ ಸಲಹೆ, ಸೂಚನೆಗಳಿಗೆ ಎಲ್ಲೆಡೆ ಗೌರವ ಸಿಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ದೇಶದ ಗೌರವ, ಪ್ರತಿಷ್ಠೆ ಹೆಚ್ಚಾಗಿದೆ ಎಂದರು.

ತಾವು ಈಚೆಗೆ ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ನೌಕಾಪಡೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದ್ದು, ಭಾರತದ ಜತೆ ಕೈಜೋಡಿಸಲು ಅವರು ಬಯಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಆರ್‌. ಹರಿಕುಮಾರ ಮತ್ತು ವೈಸ್‌ ಅಡ್ಮಿರಲ್‌ ಅಜೇಂದ್ರ ಬಹದ್ದೂರ ಸಿಂಗ್‌, ರಿಯರ್‌ ಅಡ್ಮಿರಲ್‌ ಅತುಲ್‌ ಆನಂದ್‌, ಶಾಸಕಿ ರೂಪಾಲಿ ನಾಯ್ಕ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...