Sunday, May 17, 2026
Sunday, May 17, 2026

ಸರ್ಕಾರಿ ಶಾಲೆಗೆ ಡಿಮ್ಯಾಂಡಪೋ ಡಿಮ್ಯಾಂಡ್

Date:

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಭರ್ತಿಯಾಗಿದೆ. ದಾಖಲಾತಿ ಪ್ರಕ್ರಿಯೆಯನ್ನೇ ನಿಲ್ಲಿಸಿದ್ದಾರೆ. ಆದರೂ, ‘ಇದೇ ಶಾಲೆಗೆ ನಮ್ಮ ಮಕ್ಕಳು ಸೇರಬೇಕು’ ಎನ್ನುವುದು ಪಾಲಕರ ಒತ್ತಾಸೆ.

ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ತಮ್ಮ ಮಕ್ಕಳಿಗೆ ಪ್ರವೇಶ ದೊರಕಿಸಲು ಪೋಷಕರು ಹರಸಾಹಸ ಪಡಬೇಕಿದೆ.
ಗುಣಮಟ್ಟದ ಶಿಕ್ಷಣ ಇನ್ನಿತರೆ ಸೌಲಭ್ಯಗಳ ಕಾರಣ ನಿರೀಕ್ಷೆ ಮೀರಿ ಮಕ್ಕಳು ದಾಖಲಾತಿ ಪಡೆಯುತ್ತಿದ್ದಾರೆ.
ಈ ಪರಿಯಾಗಿ ಬೇಡಿಕೆ ಸೃಷ್ಟಿಯಾಗಿರುವುದು ನಗರದ ಸರ್ಕಾರಿ ಶಾಲೆಗೆ. ನಗರದ ದುರ್ಗಿಗುಡಿಯ ಸರ್ಕಾರಿ ಮಾದರಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಈಗಾಗಲೇ ಮಕ್ಕಳು ಹೆಚ್ಚಾಗಿದ್ದಾರೆ. ಇನ್ನಷ್ಟು ಹೆಚ್ಚಾದರೆ ಬೋಧನೆ, ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಕಷ್ಟವಾಗಲಿದೆ. ಪ್ರಮುಖವಾಗಿ ಮಕ್ಕಳಿಗೆ ಆಸನದ ಕೊರತೆ ಎದುರಾಗಲಿದೆ ಎನ್ನುತ್ತಾರೆ ಇಲ್ಲಿನ ಶಿಕ್ಷಕರು. ಆದರೆ, ಪಾಲಕರು ತಮ್ಮ ಮಕ್ಕಳು ಇದೇ ಶಾಲೆಗೆ ಸೇರಿಸಲು ಒತ್ತಡ ಹೇರುತ್ತಿದ್ದಾರೆ.

ಶಾಲೆಯಲ್ಲಿ 900 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅವಕಾಶವಿದೆ. ಈಗಾಗಲೇ ಈ ಶಾಲೆಯಲ್ಲಿ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಇನ್ನೂ ದಾಖಲಾತಿಗೆ ಅರ್ಜಿಗಳು ಬರುತ್ತಲೇ ಇವೆ.

ಸರ್ಕಾರಿ ಶಾಲೆ ಎಂದು ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಇಲ್ಲಿನ ದುರ್ಗಿಗುಡಿ ಶಾಲೆ ಈಗ ಖಾಸಗಿ ಶಾಲೆಗೂ ಸಡ್ಡುಹೊಡೆದು ಸ್ಮಾರ್ಟ್ ಆಗಿದೆ. ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ಸ್ಮಾರ್ಟ್ ಕ್ಲಾಸ್‍ಗಳನ್ನು ಪ್ರಾರಂಭಿಸಲಾಗುತ್ತಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ದುರ್ಗಿಗುಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಈಗಾಗಲೇ ಮಾದರಿಯಾಗಿ ಸ್ಮಾರ್ಟ್ ತರಗತಿಗಳನ್ನು ಪ್ರಾರಂಭಿಸಲಾಗಿದೆ.

ಸರ್ಕಾರದ ಪಠ್ಯಕ್ರಮವನ್ನು ಡಿಜಿಟಲೀಕರಣಗೊಳಿಸಿ ಶಾಲೆಗೆ ನೀಡಲಾಗಿದೆ. ಇವುಗಳ ಜತೆಗೆ ಯೂಟ್ಯೂಬ್ ಹಾಗೂ ಗೂಗಲ್ ಮೂಲಕ ಪಠ್ಯಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ವಿದ್ಯಾರ್ಥಿಗಳಿಗೆ ತೋರಿಸಲಾಗುತ್ತಿದೆ. ಅವುಗಳನ್ನು ಕೆ-ಯಾನ್ ಪ್ರೊಜೆಕ್ಟರ್ ಮೂಲಕ ಸ್ಮಾರ್ಟ್ ಬೋರ್ಡ್ ಮೇಲೆ ಪ್ರದರ್ಶಿಸಲಾಗುತ್ತಿದೆ. ಹೀಗೆ ಪ್ರದರ್ಶನಗೊಂಡ ಪಠ್ಯಗಳ ಕುರಿತು ಆವಶ್ಯಕತೆ ಇದ್ದಾಗ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವರಿಸುತ್ತಿದ್ದಾರೆ.

ಸ್ಮಾರ್ಟ್ ಬೋರ್ಡ್ ಮೇಲೆ ಬರೆಯಲು, ಪಠ್ಯವನ್ನು ಮೇಲೆ ಕೆಳಗೆ ಚಲಿಸುವಂತೆ ಮಾಡಲು ಸ್ಟೈಲಸ್ ಎಂಬ ಪೆನ್ ಬಳಸಲಾಗುತ್ತದೆ. ಸ್ಟೈಲಸ್ ಸಹಾಯದಿಂದ ಕಪ್ಪು ಹಲಗೆಯ ಮೇಲೆ ಬರೆಯುವಂತೆ ಸ್ಮಾರ್ಟ್ ಬೋರ್ಡ್ ಮೇಲೆಯೂ ಬರೆದು ವಿವರಿಸಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...