Thursday, August 27, 2026
Thursday, August 27, 2026

ದಲಿತ ಯುವಕನ ಕೊಲೆ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ- ನಿರಾಣಿ

Date:

ಕಲುಬುರಗಿಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ತಪ್ಪಿತಸ್ಥ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ‌ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀಯಾಗುವುದಿಲ್ಲ ಎಂದು ನಿರಾಣಿ ಸ್ಪಷ್ಟಪಡಿಸಿದರು.
ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತಸ್ಥರು ಯಾರಿದ್ದಾರೋ ಅವರನ್ನು ಕಾನೂನು ಪ್ರಕಾರವಾಗಿ ಬಂಧಿಸಿದ್ದಾರೆ.

ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಯೇ ತಿರುತ್ತೇವೆ ಎಂದು ಅವರು ಗುಡುಗಿದರು.

ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದಲೇ ಆರೋಪಿಗಳನ್ನು ತಕ್ಷಣವೇ ಬಂಧಿಸಲು ಸಾದ್ಯವಾಗಿದೆ. ನಮ್ಮ ಪೊಲೀಸರು ಸಮರ್ಥರಾಗಿದ್ದರಿಂದಲೇ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾನು ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತನಾಡಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿನೆ ಕೊಡಲಾಗಿತ್ತು.

ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shimoga ಇಂಟರಾಕ್ಟ್ ಕ್ಲಬ್ ಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅತ್ಯುತ್ತಮ ವೇದಿಕೆ: ಸುಮತಿ ಜಿ.ಕುಮಾರಸ್ವಾಮಿ

Rotary Club Shimoga ಇಂಟರಾಕ್ಟ್ ಕ್ಲಬ್‌ಗಳು ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಸಾರ್ವಜನಿಕ...

S.N. Channabasappa “ಮನರಂಜನೆ” ಮನುಷ್ಯ ಜೀವನದ ಭಾಗ.ಆ ಸಾಂಸ್ಕೃತಿಕ ಸೊಬಗು ಜೀವನದಲ್ಲಿ ಅಡಕವಾಗಿರಬೇಕು- ಎಸ್.ಎನ್.ಚನ್ನಬಸಪ್ಪ

S.N. Channabasappa ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ...

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...