Friday, July 10, 2026
Friday, July 10, 2026

ದಲಿತ ಯುವಕನ ಕೊಲೆ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ- ನಿರಾಣಿ

Date:

ಕಲುಬುರಗಿಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ತಪ್ಪಿತಸ್ಥ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ‌ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀಯಾಗುವುದಿಲ್ಲ ಎಂದು ನಿರಾಣಿ ಸ್ಪಷ್ಟಪಡಿಸಿದರು.
ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತಸ್ಥರು ಯಾರಿದ್ದಾರೋ ಅವರನ್ನು ಕಾನೂನು ಪ್ರಕಾರವಾಗಿ ಬಂಧಿಸಿದ್ದಾರೆ.

ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಯೇ ತಿರುತ್ತೇವೆ ಎಂದು ಅವರು ಗುಡುಗಿದರು.

ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದಲೇ ಆರೋಪಿಗಳನ್ನು ತಕ್ಷಣವೇ ಬಂಧಿಸಲು ಸಾದ್ಯವಾಗಿದೆ. ನಮ್ಮ ಪೊಲೀಸರು ಸಮರ್ಥರಾಗಿದ್ದರಿಂದಲೇ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾನು ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತನಾಡಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿನೆ ಕೊಡಲಾಗಿತ್ತು.

ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...