Wednesday, December 17, 2025
Wednesday, December 17, 2025

ಲೇಖಕಿ ಗೀತಾಂಜಲಿಶ್ರೀ ಅವರ ಕೃತಿಗೆ ಬೂಕರ್ ಪ್ರಶಸ್ತಿ

Date:

ಲೇಖಕಿ ಗೀತಾಂಜಲಿ ಶ್ರೀ ಅವರ ಹಿಂದಿ ಕಾದಂಬರಿಗೆ ಟೋಂಬ್ ಆಫ್ ಸ್ಯಾಂಡ್ ಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಮೂಲಕ ಇದೇ ಪ್ರಥಮ ಬಾರಿಗೆ ಯಾವುದೇ ಭಾರತೀಯ ಭಾಷೆಯಲ್ಲಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಪುಸ್ತಕ ಎಂಬ ಗೌರವಕ್ಕೆ ಪಾತ್ರವಾಗಿದೆ.

ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ, ದೆಹಲಿ ಮೂಲದ ಲೇಖಕಿ ಗೀತಾಂಜಲಿ ಶ್ರೀ ಅವರು ಇವರ ಪುಸ್ತಕದ ಇಂಗ್ಲಿಷ್ ಅನುವಾದಕಿ ಡೈಸಿ ರಾಕ್‌ವೆಲ್ ಅವರೊಂದಿಗೆ 50,000 ಮೌಲ್ಯದ ಬಹುಮಾನವನ್ನು ಸ್ವೀಕರಿಸಿದ್ದಾರೆ. ಇಷ್ಟಲ್ಲದೇ ಪ್ರಶಸ್ತಿಯಿಂದ ತಮ್ಮ ಹೃದಯ ತುಂಬಿ ಬಂದಿರುವುದಾಗಿ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಟೋಂಬ್ ಆಫ್ ಸ್ಯಾಂಡ್ ಕಾದಂಬರಿಯೂ ಮೂಲತಃ ಹಿಂದಿಯಲ್ಲಿ ರೆಟ್ ಸಮಾಧಿ ಎಂದು ಇದೆ. ಉತ್ತರ ಭಾರತ ಮೂಲದ 80 ವರ್ಷದ ಮಹಿಳೆಯನ್ನು ಆಧರಿಸಿದ ಕತೆ ಇದಾಗಿದೆ.

ಬೂಕರ್ ತೀರ್ಪುಗಾರರು ಈ ಕಾದಂಬರಿಯನ್ನು ಸಂತೋಷದ ಕಾಕೋಫೋನಿ ಹಾಗೂ ಆಕರ್ಷಣೀಯ ಕಾದಂಬರಿ ಎಂದು ಕರೆದಿದ್ದಾರೆ.

ಈ ಕಾದಂಬರಿಯಲ್ಲಿ 80ರ ಪ್ರಾಯದ ವೃದ್ದೆ ತನ್ನ ಗಂಡನನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವ ಕತೆಯಾಗಿದೆ.

ನಾನು ಬೂಕರ್‌ನ ಬಗ್ಗೆ ಕನಸು ಕಂಡಿರಲಿಲ್ಲ. ನಾನು ಅದನ್ನು ಮಾಡಬಹುದೆಂದು ನಾನು ಎಂದಿಗೂ ಯೋಚಿಸಲಿಲ್ಲ. ಎಂತಹ ದೊಡ್ಡ ಗುರುತಿಸುವಿಕೆ, ನಾನು ಆಶ್ಚರ್ಯಚಕಿತಳಾಗಿದ್ದೇನೆ. ಸಂತೋಷಪಡುತ್ತೇನೆ, ಈ ಗೌರವಕ್ಕೆ ವಿನಮ್ರಳಾಗಿದ್ದೇನೆ ಎಂದು ಲೇಖಕಿ ಗೀತಾಂಜಲಿ ಶ್ರೀ ಪ್ರಶಸ್ತಿ ಸ್ವೀಕರಿಸಿ ತಮ್ಮ ಸಂತೋಷದ ಮಾತುಗಳನ್ನು ಆಡಿದ್ದಾರೆ.

ರೆಟ್ ಸಮಾಧಿ ಅಥವಾ ಮರಳಿನ ಸಮಾಧಿ ಕಾದಂಬರಿಯಲ್ಲಿ ನಾವು ವಾಸಿಸುವ ಜಗತ್ತಿಗೆ ಒಂದು ಸೊಗಸು. ಸನ್ನಿಹಿತವಾದ ವಿನಾಶದ ಮಧ್ಯೆಯೂ ಭರವಸೆಯನ್ನು ಉಳಿಸಿಕೊಳ್ಳುವ ಶಾಶ್ವತ ಶಕ್ತಿ ಇದೆ. ಬೂಕರ್ ಪ್ರಶಸ್ತಿಯಿಂದಾಗಿ ಈ ಕಾದಂಬರಿ ಮತ್ತಷ್ಟು ಜನರನ್ನು ತಲುಪಲಿದೆ ಎಂದು ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...