Tuesday, March 24, 2026
Tuesday, March 24, 2026

ಸಾಗರ & ಹೊಸನಗರ ಎಪಿಎಂಸಿ ವಿಲೀನ ಪ್ರಸ್ತಾವನೆ ಕೈಬಿಡಲಾಗಿದೆ- ಹಾಲಪ್ಪ

Date:

ಹೊಸನಗರ ಹಾಗೂ ಸಾಗರ ಎಪಿಎಂಸಿಗಳನ್ನು ಮರ್ಜ್ ಮಾಡುವ ಪ್ರಸ್ತಾವನೆಯನ್ನು ಕೈ ಬಿಡಲಾಗಿದ್ದು, ಈಗಿರುವ ಸ್ಥಿತಿಯಲ್ಲಿಯೇ ಇವು ಕಾರ್ಯನಿರ್ವಹಿಸಲಿವೆ ಎಂದು ಸಾಗರ ಶಾಸಕ ಹರತಾಳು ಹಾಲಪ್ಪನವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸನಗರಕ್ಕೆ ಬೈಪಾಸ್ ರಸ್ತೆ ಅಗತ್ಯವಾಗಿರುವುದರಿಂದ ಇದನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಮಾಲೀಕರು ಬಿಟ್ಟು ಕೊಡಲು ಮುಂದೆ ಬಂದರೆ ಸೂಕ್ತ ಪರಿಹಾರ ನೀಡಲಾಗುತ್ತದೆ. ಬೈಪಾಸ್ ರಸ್ತೆ ಮಾಡಿದರೆ ಪಟ್ಟಣದ ಅಭಿವೃದ್ಧಿಗೂ ಅನುಕೂಲವಾಗಲಿದೆ ಎಂದು ಹೇಳಿದರು.

ಮುಳುಗಡೆ ಪ್ರದೇಶದವರಿಗೆ ಅರಣ್ಯ ಕಾಯಿದೆಗಳಿಂದ ಮುಕ್ತಿಯೇ ಇಲ್ಲದಂತಾಗಿದೆ. ಒಂದಾದ ಮೇಲೊಂದರಂತೆ ನಿಯಮಗಳನ್ನು ಹೇರಲಾಗುತ್ತಿದೆ. ಮಂಗನ ಕಾಯಿಲೆ ಸಂಶೋಧನಾ ಲ್ಯಾಬ್ ಸಾಗರದಲ್ಲಿ ಆರಂಭಿಸಲು ಗುರುತಿಸಲಾಗಿತ್ತು. ಆದರೆ ವಿಜ್ಞಾನಿಗಳು ಅಲ್ಲಿಗೆ ಬರುವುದಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಆರಂಭಿಸಬೇಕೆಂಬ ಬೇಡಿಕೆ ಬಂದಿದೆ. ಆದರೆ ಶಿವಮೊಗ್ಗದಲ್ಲಾದರೂ ಲ್ಯಾಬ್ ಆರಂಭಿಸಬೇಕೆಂದು ಒತ್ತಾಯಿಸಲಾಗಿದೆ ಎಂದರು.

ಸಾಗರ ಮತ್ತು ಹೊಸನಗರ ಎಪಿಎಂಸಿಗಳನ್ನು ವಿಲೀನ ಮಾಡಲಾಗುತ್ತದೆ ಎಂಬ ಗೊಂದಲ ರೈತ ಸಮುದಾಯದಲ್ಲಿ ಉಂಟಾಗಿತ್ತು. ಆದರೆ ಸರ್ಕಾರ ಈ ಪ್ರಸ್ತಾವನೆಯನ್ನು ಕೈ ಬಿಟ್ಟಿದೆ. ಇದರಿಂದಾಗಿ ಆಯ ನಗರದ ರೈತರಿಗೆ ಕೃಷಿ ಹುಟ್ಟುವಳಿಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ ಎಂದರು.

ಕರೂರು ಜಾಗವನ್ನು ಬಫರ್ ಜೋನ್ ಮಾಡುವ ಪ್ರಸ್ತಾವನೆಯನ್ನು ಕೈ ಬಿಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಅಣ್ಣಪ್ಪ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು...

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ...

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...