Tuesday, August 25, 2026
Tuesday, August 25, 2026

ಸಾಗರ & ಹೊಸನಗರ ಎಪಿಎಂಸಿ ವಿಲೀನ ಪ್ರಸ್ತಾವನೆ ಕೈಬಿಡಲಾಗಿದೆ- ಹಾಲಪ್ಪ

Date:

ಹೊಸನಗರ ಹಾಗೂ ಸಾಗರ ಎಪಿಎಂಸಿಗಳನ್ನು ಮರ್ಜ್ ಮಾಡುವ ಪ್ರಸ್ತಾವನೆಯನ್ನು ಕೈ ಬಿಡಲಾಗಿದ್ದು, ಈಗಿರುವ ಸ್ಥಿತಿಯಲ್ಲಿಯೇ ಇವು ಕಾರ್ಯನಿರ್ವಹಿಸಲಿವೆ ಎಂದು ಸಾಗರ ಶಾಸಕ ಹರತಾಳು ಹಾಲಪ್ಪನವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸನಗರಕ್ಕೆ ಬೈಪಾಸ್ ರಸ್ತೆ ಅಗತ್ಯವಾಗಿರುವುದರಿಂದ ಇದನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಮಾಲೀಕರು ಬಿಟ್ಟು ಕೊಡಲು ಮುಂದೆ ಬಂದರೆ ಸೂಕ್ತ ಪರಿಹಾರ ನೀಡಲಾಗುತ್ತದೆ. ಬೈಪಾಸ್ ರಸ್ತೆ ಮಾಡಿದರೆ ಪಟ್ಟಣದ ಅಭಿವೃದ್ಧಿಗೂ ಅನುಕೂಲವಾಗಲಿದೆ ಎಂದು ಹೇಳಿದರು.

ಮುಳುಗಡೆ ಪ್ರದೇಶದವರಿಗೆ ಅರಣ್ಯ ಕಾಯಿದೆಗಳಿಂದ ಮುಕ್ತಿಯೇ ಇಲ್ಲದಂತಾಗಿದೆ. ಒಂದಾದ ಮೇಲೊಂದರಂತೆ ನಿಯಮಗಳನ್ನು ಹೇರಲಾಗುತ್ತಿದೆ. ಮಂಗನ ಕಾಯಿಲೆ ಸಂಶೋಧನಾ ಲ್ಯಾಬ್ ಸಾಗರದಲ್ಲಿ ಆರಂಭಿಸಲು ಗುರುತಿಸಲಾಗಿತ್ತು. ಆದರೆ ವಿಜ್ಞಾನಿಗಳು ಅಲ್ಲಿಗೆ ಬರುವುದಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಆರಂಭಿಸಬೇಕೆಂಬ ಬೇಡಿಕೆ ಬಂದಿದೆ. ಆದರೆ ಶಿವಮೊಗ್ಗದಲ್ಲಾದರೂ ಲ್ಯಾಬ್ ಆರಂಭಿಸಬೇಕೆಂದು ಒತ್ತಾಯಿಸಲಾಗಿದೆ ಎಂದರು.

ಸಾಗರ ಮತ್ತು ಹೊಸನಗರ ಎಪಿಎಂಸಿಗಳನ್ನು ವಿಲೀನ ಮಾಡಲಾಗುತ್ತದೆ ಎಂಬ ಗೊಂದಲ ರೈತ ಸಮುದಾಯದಲ್ಲಿ ಉಂಟಾಗಿತ್ತು. ಆದರೆ ಸರ್ಕಾರ ಈ ಪ್ರಸ್ತಾವನೆಯನ್ನು ಕೈ ಬಿಟ್ಟಿದೆ. ಇದರಿಂದಾಗಿ ಆಯ ನಗರದ ರೈತರಿಗೆ ಕೃಷಿ ಹುಟ್ಟುವಳಿಗಳನ್ನು ಮಾರಾಟ ಮಾಡಲು ಅನುಕೂಲವಾಗಲಿದೆ ಎಂದರು.

ಕರೂರು ಜಾಗವನ್ನು ಬಫರ್ ಜೋನ್ ಮಾಡುವ ಪ್ರಸ್ತಾವನೆಯನ್ನು ಕೈ ಬಿಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಅಣ್ಣಪ್ಪ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...