Tuesday, March 24, 2026
Tuesday, March 24, 2026

ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ

Date:

ಹಿಜಾಬ್ ವಿವಾದದಿಂದಾಗಿ ಇಡೀ ರಾಜ್ಯದಾದ್ಯಂತ ಅಶಾಂತಿಗೆ ಕಾರಣವಾಗಿತ್ತು. ಇನ್ನೇನು ಎಲ್ಲಾ ತಣ್ಣಾಗಾಗಿತ್ತು ಎನೂವಷ್ಟರಲ್ಲಿ ಮಂಗಳೂರಿನ ಜಿಲ್ಲೆಯಲ್ಲಿ ಹಿಜಾಬ್ ವಿವಾದ ಮತ್ತೆ ಬೆಳಕಿಗೆ ಬಂದಿದೆ.

ಅದೇನು ಅಂದರೆ, ಈಗಾಗಲೇ ಹೈಕೋರ್ಟ್ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ಹೋಗುವಂತಿಲ್ಲ ಎಂದು ತೀರ್ಮಾನ ನೀಡಿದೆ. ಆದರೂ ಸಹ ಮಂಗಳೂರಿನ ವಿವಿ ಘಟಕ ಕಾಲೇಜಿಗೆ ಮುಸ್ಲಿಂ ಸಮುದಾಯದ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲೆ ಡಾ.ಅನುಸೂಯ ರೈ ತರಗತಿಗೆ ಬಾರದಂತೆ ಪ್ರವೇಶ ನಿರಾಕರಿಸಿದ್ದಾರೆ.

ನಂತರ ವಿದ್ಯಾರ್ಥಿನಿಯರು ಕಾಲೇಜು ಗ್ರಂಥಾಲಯದತ್ತ ತೆರಳಿದ್ದಾರೆ. ಅಲ್ಲೂ ವಿದ್ಯಾರ್ಥಿನಿಯರನ್ನು ತಡೆದು ಪ್ರಾಂಶುಪಾಲೆ ಬುದ್ಧಿ ಹೇಳಿದ್ದಾರೆ.

ಹಿಜಾಬ್ ತೆಗೆದಿಟ್ಟು ತರಗತಿಗೆ ಹೋಗಿ ಎಂದು ಪ್ರಾಂಶುಪಾಲೆ ಡಾ.ಅನುಸೂಯ ರೈ ಅವರು ಹೇಳಿದ್ದಾರೆ.

ಆದರೂ ವಿದ್ಯಾರ್ಥಿನಿಯರು ಕಾಲೇಜು ಲೈಬ್ರರಿ ಎದುರು ನಿಂತಿದ್ದಾರೆ.

ತರಗತಿಗಳಲ್ಲಿ ಮಾತ್ರವಲ್ಲ. ಕ್ಯಾಂಪಸ್ನಲ್ಲೂ ಹಿಜಾಬ್ ಗೆ ಅವಕಾಶ ಕೊಡುವುದಿಲ್ಲ ಎಂದು ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲರಾದ ಅನುಸೂಯ ರೈ ಅವರು ತಿಳಿಸಿದ್ದಾರೆ.

ನಮ್ಮಲ್ಲಿ 44 ಜನ ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಕೆಲ ವಿದ್ಯಾರ್ಥಿಗಳಿಗೆ ಮಾತ್ರ ಈ ಆದೇಶದ ಬಗ್ಗೆ ಸಮಸ್ಯೆ ಇದೆ. ಅವರನ್ನು ಅವರ ಪೋಷಕರ ಮನವೊಲಿಸಲು ನಮಗೆ ಸಮಯ ಬೇಕು. ಅವರು ನ್ಯಾಯಾಲಯದ ಆದೇಶ ಆಡಳಿತ ಮಂಡಳಿಯಿಂದ ನಿಯಮವನ್ನು ಪಾಲಿಸಲೇ ಬೇಕು. ಆಡಳಿತ ಮಂಡಳಿ ಆದೇಶ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಅನೇಕ ಶಾಸಕರು ಕರೆ ಮಾಡಿದ್ದಾರೆ ನನಗೆ ಯಾರು ಒತ್ತಡ ಹಾಕಿಲ್ಲ. ಕೇವಲ ನಮ್ಮ ಆದೇಶದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಪ್ರಾಂಶುಪಾಲರಾದ ಅನುಸೂಯ ರೈ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...