Wednesday, October 2, 2024
Wednesday, October 2, 2024

ಟಾಟಾ ಐಪಿಎಲ್22 ಮತ್ತೆ ತಪ್ ಮಾಡಿ ಕಪ್ ಗೆಲ್ಲದ ಆರ್ ಸಿಬಿ

Date:

ಈ ಬಾರಿಯಾದರೂ ಪ್ರಶಸ್ತಿ ಗೆಲ್ಲುತ್ತದೆ. ಹೊಸ ಇತಿಹಾಸ ಬರೆಯುತ್ತದೆ, ದಾಖಲೆ ನಿರ್ಮಾಣವಾಗುತ್ತೆ ಅನ್ನೋ ಆರ್‌ಸಿಬಿ ಅಭಿಮಾನಿಗಳ ಕನಸು ಮತ್ತೆ ಕನಸಾಗಿಯೇ ಉಳಿದುಕೊಂಡಿದೆ.

ಐಪಿಎಲ್ 2022 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೋರಾಟ ಅಂತ್ಯಗೊಂಡಿದೆ.
ಆರ್‌ಸಿಬಿ ವಿರುದ್ಧ ಅಬ್ಬರಿಸಿದ ಜೋಸ್ ಬಟ್ಲರ್ ಸೆಂಚುರಿ ಸಿಡಿಸಿದರು. ಈ ಮೂಲಕ ರಾಜಸ್ಥಾನ ರಾಯಲ್ಸ್ 7 ವಿಕೆಟ್ ಗೆಲುವು ದಾಖಲಿಸಿ ಫೈನಲ್ ಪ್ರವೇಶಿಸಿದೆ.

ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ ಬಟ್ಲರ್ 59 ಎಸೆತದಲ್ಲಿ ಸೆಂಚುರಿ ಪೂರೈಸಿದರು. ಈ ಮೂಲಕ ಆರ್‌ಸಿಬಿ ಕನಸು ಛಿದ್ರಗೊಳಿಸಿದರು. ಐಪಿಎಲ್ 2022 ಟೂರ್ನಿಯಲ್ಲಿ ಫೈನಲ್ ಪ್ರವಶಿಸಿ ಪ್ರಶಸ್ತಿ ಗೆಲ್ಲುವ ಕನಸು ಕಂಡಿದ್ದ ಆರ್‌ಸಿಬಿ ಬಟ್ಲರ್ ಅಬ್ಬರಕ್ಕೆ ಬೆಚ್ಚಿ ಬಿದ್ದಿತು. ಐಪಿಎಲ್ 2022 ಹೋರಾಟವನ್ನೂ ಅಂತ್ಯಗೊಳಿಸಿತು.

ಈ ಮೂಲಕ ಐಪಿಎಲ್ ಟೂರ್ನಿಯಲ್ಲಿ ಒಟ್ಟ 5 ಸೆಂಚುರಿ ಸಿಡಿಸಿದ ಸಾಧನೆ ಮಾಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಅಬ್ಬರಿಸಿದ ಜೋಸ್ ಬಟ್ಲರ್ ಆಕರ್ಷಕ ಶತಕ ದಾಖಲಿಸಿದ್ದಾರೆ.

2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಪರಿಣಾಮ 157 ರನ್ ಸಿಡಿಸಿತು. ಸುಲಭ ಟಾರ್ಗೆಟ್ ಪಡೆದ ರಾಜಸ್ಥಾನ ರಾಯಲ್ಸ್ ನಿರಾಯಾಸವಾಗಿ ಚೇಸಿಂಗ್ ಮಾಡಿತು. ಪ್ರಮುಖವಾಗಿ ಜೋಸ್ ಬಟ್ಲರ್ ಬ್ಯಾಟಿಂಗ್ ಆರ್‌ಸಿಬಿ ಐಪಿಎಲ್ ಹೋರಾಟಕ್ಕೆ ಬ್ರೇಕ್ ಹಾಕಿತು.

ದೇವದತ್ ಪಡಿಕ್ಕಲ್ 9 ರನ್ ಸಿಡಿಸಿ ಔಚಾದರು. ಜೋಸ್ ಬಟ್ಲರ್ ಸೆಂಚುರಿ ಸಿಡಿಸಿ ದಾಖಲೆ ಬೆರೆದರು. ರಾಜಸ್ಥಾನ 18.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು.
ಆರ್‌ಸಿಬಿ ಇನ್ನಿಂಗ್ಸ್
ಮಹತ್ವದ ಪಂದ್ಯದಲ್ಲಿ ಆರ್‌ಸಿಬಿ ಬ್ಯಾಟಿಂಗ್‌ನಲ್ಲಿ ಎಡವಿತು. ವಿರಾಟ್ ಕೊಹ್ಲಿ 7 ರನ್ ಸಿಡಿಸಿ ಔಟಾದರು. ಫಾಫ್ ಡುಪ್ಲೆಸಿಸ್ 25 ರನ್ ಸಿಡಿಸಿ ಔಟಾದರು.

ಎಲಿಮಿನೇಟರ್ ಪಂದ್ಯದಲ್ಲಿ ಅಬ್ಬರಿಸಿದ ರಜತ್ ಪಾಟಿದಾರ್ , 2ನೇ ಕ್ವಾಲಿಫೈಯರ್ ಪಂದ್ಯದಲ್ಲೂ ಅಬ್ಬರಿಸಿದರು. ರಜತ್ ಪಾಟಿದಾರ್ 58 ರನ್ ಕಾಣಿಕೆ ನೀಡಿದರು. ಮ್ಯಾಕ್ಸ್‌ವೆಲ್ 28 ರನ್ ಸಿಡಿಸಿ ಔಟಾದರು. ಇನ್ನುಳಿದವರಿಂದ ನಿರೀಕ್ಷಿತ ರನ್ ಹರಿದುಬರ್ಲಿಲ್ಲ. ಇದರಿಂದ 157 ರನ್ ಸಿಡಿಸಿತು.

ಐಪಿಎಲ್ ಫೈನಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿದ ರಾಜಸ್ಥಾನ ರಾಯಲ್ಸ್ ಫೈನಲ್ ಪ್ರವೇಶಿಸಿದೆ. ಮೇ.29 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗಲಿದೆ.

ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ವಿರುದ್ದ ಮುಗ್ಗರಿಸಿದ್ದ ರಾಜಸ್ಥಾನ ಇದೀಗ ಸೇಡು ತೀರಿಸಿಕೊಳ್ಳಲು ರೆಡಿಯಾಗಿದೆ. ಇಷ್ಟೇ ಅಲ್ಲ ಎರಡನೇ ಐಪಿಎಲ್ ಟ್ರೋಫಿ ಕೈವಶ ಮಾಡಲು ಸಜ್ಜಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...