Saturday, May 9, 2026
Saturday, May 9, 2026

ಸ್ಟಾರ್ಟ್ ಅಪ್ ಮೂಲಕ ಭವ್ಯ ಭಾರತ ನಿರ್ಮಾಣವಾಗುತ್ತಿದೆ-ಮೋದಿ

Date:

ಭವಿಷ್ಯದಲ್ಲಿ ನಾವು ಭಾರತದಲ್ಲಿ ಹೊಸ ಎತ್ತರವನ್ನು ತಲುಪುವ ಸ್ಟಾರ್ಟ್‌ ಅಪ್‌ ಗಳಿಗೆ ಸಾಕ್ಷಿಯಾಗುತ್ತೇವೆ ಎಂದು ನನಗೆ ವಿಶ್ವಾಸವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

‘ಮನ್ ಕಿ ಬಾತ್‌’ನ 89 ನೇ ಆವೃತ್ತಿಯಲ್ಲಿ ದೇಶದ ಜನ್ನರನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮಲ್ಲಿ ವೈವಿಧ್ಯಮಯ ಸಂಸ್ಕೃತಿ ಇದೆ. ಭಾರತ ವಿವಿಧ ಭಾಷೆ ಮತ್ತು ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ತೀರ್ಥಯಾತ್ರೆಗೆ ಹೊರಟಾಗಲೆಲ್ಲಾ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾವಿರಾರು ಯಾತ್ರಿಕರು ಆಗಮಿಸುತ್ತಿರುವ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆ ನಡೆಯುತ್ತಿದೆ. ಕೇದಾರನಾಥದಲ್ಲಿ ಕೆಲವು ಯಾತ್ರಾರ್ಥಿಗಳು ಹರಡಿದ ಕಸದಿಂದ ಯಾತ್ರಿಕರು ಬೇಸರವಾಗಿರುವುದನ್ನು ನಾನು ನೋಡಿದ್ದೇನೆ. ಕೆಲವು ಯಾತ್ರಾರ್ಥಿಗಳು ತಮ್ಮ ಯಾತ್ರೆಯ ಸಮಯದಲ್ಲಿ ತಮ್ಮ ವಾಸ್ತವ್ಯದ ಹತ್ತಿರದ ಪ್ರದೇಶಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ ಎಂದು ಹೇಳಿದರು.

ಸ್ಟಾರ್ಟ್ ಅಪ್ ಮೂಲಕ ನವಭಾರತ ನಿರ್ಮಾಣವಾಗುತ್ತಿದೆ.ಉತ್ತಮ ಮಾರ್ಗದರ್ಶನದೊಂದಿಗೆ ಸ್ಟಾರ್ಟ್ ಅಪ್ ವಿಸ್ತರಣೆಯಾಗುತ್ತಿವೆ. ಸ್ಟಾರ್ಟ್‌ ಅಪ್‌ ಗಳು ಯುವ ಭಾರತದ ಸ್ಪೂರ್ತಿ. ಅವು ನವ ಭಾರತದ ಚೈತನ್ಯವನ್ನು ಪ್ರತಿಬಿಂಬಿಸುತ್ತವೆ. ಸರಿಯಾದ ಮಾರ್ಗದರ್ಶನವು ಸ್ಟಾರ್ಟ್ ಅಪ್‌ ಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಹುದು ಎಂದು ಹೇಳಿದರು.

ದೇಶದಲ್ಲಿ ಇಂದು ಗ್ರಾಮಗಳಲ್ಲಿಯೂ ಸ್ಟಾರ್ಟ್ ಅಪ್ ಶುರುವಾಗಿವೆ. ವಿಶ್ವದಲ್ಲಿ ಭಾರತದ ಸಾಮರ್ಥ್ಯದ ಬಗ್ಗೆ ಭರವಸೆ ಮೂಡಿದೆ
ಸರಿಯಾದ ಮಾರ್ಗದರ್ಶನ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಭಾರತದಲ್ಲಿ ಸಹಾಯ ಮಾಡಲು ಬದ್ಧವಾಗಿರುವ ಅನೇಕ ಮಾರ್ಗದರ್ಶಕರು ಇದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...