Monday, March 23, 2026
Monday, March 23, 2026

ಸಂಶೋಧಕನಿಗೆ ಸೂಕ್ಷ್ಮಮತಿ & ಸಮಗ್ರ ದೃಷ್ಟಿ ಇರಬೇಕು- ಪ್ರೊ.ಕಲ್ಗುಡಿ

Date:

ಯಾವುದೇ ಸಂಶೋಧನೆ ಏಕಮುಖಿಯಾಗಿರುವುದಿಲ್ಲ. ಬಹುಶಿಸ್ತೀಯ ಆಯಾಮ ಹೊಂದಿರುತ್ತದೆ. ಹೀಗಾಗಿ ಸಂಶೋಧಕರು ಸೂಕ್ಷಮತಿಗಳಾಗಿರಬೇಕು ಮತ್ತು ಸಮಗ್ರ ದೃಷ್ಟಿಕೋನ ಹೊಂದಿರಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ವಿಭಾಗ ‘ಕನ್ನಡ ಸಾಹಿತ್ಯ ಮತ್ತು ಅನ್ಯ ಶಿಸ್ತು’ ಕುರಿತು ಆಯೋಜಿಸಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಸಮಕಾಲೀನ ಸಂಶೋಧನೆಗಳು ಬದ್ಧತೆಯನ್ನು ಕಳೆದುಕೊಂಡಿವೆ.

ಸಮಾಜಮುಖಿ ಉದ್ದಿಶ್ಯಗಳನ್ನು ಮರೆತಂತಿದೆ.
ಈ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳದ ಹೊರತು ಅಂತರ್ ಶಿಸ್ತೀಯ ಸಂಶೋಧನೆಗಳು ಯಶಸ್ಸು ಕಾಣಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಸಂಶೋಧನೆಗೆ ಭವ್ಯ ಪರಂಪರೆ ಇದೆ. ಎಲ್. ಬಸವರಾಜು, ಎಂ ಎಂ ಕಲಬುರ್ಗಿ, ಚಿದಾನಂದ ಮೂರ್ತಿ ಅವರಂಥಹ ದಿಗ್ಗಜರು ತಮ್ಮ ಸಂಶೋಧನಾ ಕಾರ್ಯಗಳ ಮೂಲಕ ಕನ್ನಡದ ಅಸ್ಮಿತೆಗೆ ಅನನ್ಯವಾದ ಕೊಡುಗೆ ನೀಡಿದ್ದಾರೆ. ಈ ಮಹನೀಯರು ಅನುಸರಿಸಿದ ವಸ್ತುನಿಷ್ಠ ವಿಧಾನಗಳು ಸಮಕಾಲೀನ ಸಂಶೋಧಕರಿಗೆ ಮಾದರಿಯಾಗಬಲ್ಲದು ಎಂದರು.

ವಿಭಾಗದ ಮುಖ್ಯಸ್ಥ ಪ್ರೊ. ಜಿ. ಪ್ರಶಾಂತ ನಾಯಕ ಮಾತನಾಡಿ, ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ಕೈಗೊಳ್ಳುವ ವಿದ್ಯಾರ್ಥಿಗಳು ಅಂತರ್ ಶಿಸ್ತೀಯ ವಿಷಯಗಳ ಬಗ್ಗೆ ಗಮನಹರಿಸುವುದು ಸೂಕ್ತ. ಈ ನಿಟ್ಟಿನಲ್ಲಿ ಪ್ರಸ್ತುತ ಬಳಕೆಯಲ್ಲಿರುವ ಸಂಶೋಧನಾ ವಿಧಾನಗಳನ್ನು ಮರುರೂಪಿಸುವ ಅಗತ್ಯವಿದೆ ಎಂದರು.
ಪ್ರೊ. ಶಿವಾನಂದ ಕೆಳಗಿನಮನಿ, ಡಾ. ನೆಲ್ಲಿಕಟ್ಟೆ ಸಿದ್ದೇಶ್, ಡಾ. ಮೋಹನ್ ಚಂದ್ರಗುತ್ತಿ, ಅಧ್ಯಾಪಕರು ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...