Tuesday, March 24, 2026
Tuesday, March 24, 2026

ಆರ್ ಎಸ್ಎಸ್ ಟೀಕಿಸುವ ಮೂಲಕ ಸಿದ್ಧರಾಮಯ್ಯ ಮುಂಚೂಣಿಗೆ ಯತ್ನ- ಕಟೀಲ್

Date:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು. ಹೆಸರು ಮಾತ್ರ ರಾಮಂದು, ಮುಖ ರಾವಣಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ತುಮಕೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಬಗ್ಗೆ ಯೋಚನೆ ಮಾಡಿದ ಸಿದ್ದರಾಮಯ್ಯ, ರೈತರ ಬದುಕು ಹಸನು ಮಾಡುವ ಬಗೆ ಯೋಚನೆ ಮಾಡಲಿಲ್ಲ. ರೈತರ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಹಾಗಾಗಿ ಅನೇಕ ನಾಯಕರು ಕಾಂಗ್ರೆಸ್ ತೊರೆದಿದ್ದರು. ಅತಿ ಹೆಚ್ಚು ಗೋ ಹತ್ಯೆ ನಡೆದಿದ್ದು ಸಿದ್ದರಾಮಯ್ಯ ಕಾಲದಲ್ಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರ ಕಾರಣದಿಂದ 61 ಮಂದಿ ಕಾಂಗ್ರೆಸ್ ನಾಯಕರು ಪಕ್ಷ ತೊರೆದಿದ್ದಾರೆ ಎಂದು ಹೇಳಿದ ಅವರ ಅವರ ಹೆಸರು ಹೇಳಲು ಹೇಳಲಿಲ್ಲ.

ಕುವೆಂಪು ಅವರ ಹಾಡನ್ನು ರೈತ ಗೀತೆ ಮಾಡಿದ್ದು ನಮ್ಮ ಯಡಿಯೂರಪ್ಪನವರ ಸರ್ಕಾರ. ಕಾಂಗ್ರೆಸ್ ರೈತರು ದೇಶದ ಬೆನ್ನೆಲಬು ಎಂದು ಹೇಳಿದ್ದಾರೆ. ಆದರೆ, ಯಾವತ್ತೂ ರೈತರ ಬೆನ್ನಿಗೆ ನಿಲ್ಲಲಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಬೆನ್ನಿಗೆ ನಿಂತಿದೆ. ಕಿಸಾನ್ ಸಮ್ಮಾನ್‌ ಯೋಜನೆ, ಫಸಲ್ ಭೀಮಾ‌ ಯೋಜನೆ ಮೂಲಕ ರೈತರ ಬೆನ್ನಿಗೆ ನಿಂತಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಜಿ ಕೇಂದ್ರದ ಆಸೆಗಾಗಿ ಆರ್​ಎಸ್​ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ಟ್ವೀಟ್​ಗೆ ತಿರುಗೇಟು ನೀಡಿದ್ದಾರೆ. ಇಟಲಿ ಮೂಲದ ನಾಯಕರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಆ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಇನ್ಮೇಲೆ ನಾನು ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಬಾರದೆಂದು ತೀರ್ಮಾನಿಸಿದ್ದೇನೆ ಎಂದು ಜೋಶಿ ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಓರ್ವ ಡ್ಯುಪ್ಲಿಕೇಟ್ ಕಾಂಗ್ರೆಸ್​ನ ಡ್ಯುಪ್ಲಿಕೇಟ್ ಲೀಡರ್.

ನಾವ್ಯಾರೂ ಕೇವಲ ಬಿಜೆಪಿಯವರೇ ಹಿಂದೂಗಳೆಂದು ಹೇಳಿಲ್ಲ. ಸದ್ಯ ಇವರು ನಾವು ಹಿಂದೂಗಳೆಂದು ಹೇಳುತ್ತಿದ್ದಾರೆ ಅನ್ನೋದೇ ಸಂತೋಷ. ಈ ಹಿಂದೆ ಇವರು ನಾವು ಹಿಂದೂಗಳೇ ಅಲ್ಲ ಎನ್ನುತ್ತಿದ್ದರು. ಇವಾಗ ಹಿಂದೂ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಮಲ್ಲಿಕಾರ್ಜುನ ಖರ್ಗೆ ಅವರಂತಹ ಹಿರಿಯ ನಾಯಕರನ್ನು ಪಕ್ಕಕ್ಕೆ ಸರಿಸಿ ಸಿದ್ದರಾಮಯ್ಯ ಸಿಎಂ ಆದರು, ಆದರೆ ಅವರಿಗೆ ಪಕ್ಷ ನಿಷ್ಠೆ ಇಲ್ಲ ಎಂದು ಜೋಶಿ ಆರೋಪಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಮಾತಿಗೆ ತೂಕವಿತ್ತು. ಈಗ ಅವರ ಮಾತನ್ನು ಅವರ ಪಕ್ಷದ ಕಾರ್ಯಕರ್ತರೇ ಕೇಳುತ್ತಿಲ್ಲ. ಅವರ ಮಾತಿಗೆ ಕಿಮ್ಮತ್ತು ಇಲ್ಲ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣನೆ ಮಾಡಿರುವುದರಿಂದ ಆರ್‌ಎಸ್‌ಎಸ್‌, ಟೀಕಿಸಿ ಮುಂಚೂಣಿಗೆ ಬರಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ಆರ್‌ಎಸ್‌ಎಸ್‌ ಬಗ್ಗೆ ಅಧ್ಯಯನ ಮಾಡಿಲ್ಲ. ಅವರಿಗೆ ಆ ಕುರಿತು ಕನಿಷ್ಠ ಜ್ಞಾನವೂ ಇಲ್ಲ. ಅವರನ್ನು ಒಮ್ಮೆ ಆರ್‌ಎಸ್‌ಎಸ್‌ ಕಚೇರಿಗೆ ಕರೆದೊಯ್ಯುತ್ತೇವೆ. ಅವರು ಅಲ್ಲಿನ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡಲಿ. ಇಲ್ಲವೇ ಆರ್‌ಎಸ್‌ಎಸ್‌ ಕುರಿತ ಪುಸ್ತಕ ನೀಡುತ್ತೇವೆ. ಆಗಲಾದರೂ ಅವರಿಗೆ ಆರ್‌ಎಸ್‌ಎಸ್‌ ಮಾಡುವ ಸಮಾಜಮುಖಿ ಕಾರ್ಯಗಳು ಅರ್ಥವಾಗಬಹುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...