Thursday, August 13, 2026
Thursday, August 13, 2026

ಕನ್ನಡ ಡಿಂಡಿಮವನ್ನ ರಾಷ್ಟ್ರಮಟ್ಟದಲ್ಲಿ ಮುಟ್ಟಿಸುವ ಯತ್ನ ಮಾಡುವೆ- ಜಗ್ಗೇಶ್

Date:

ನನಗೆ ಯಾವ ನಿರೀಕ್ಷೆ ಇರಲಿಲ್ಲ. ನಾನು ಬಹಳ ನಿಷ್ಠೆಯಿಂದ ಪಕ್ಷಕ್ಕೆ ಕೆಲಸ ಮಾಡಿದ್ದೆ ಮುಖ್ಯಮಂತ್ರಿಗಳು ಮತ್ತು ಸ್ನೇಹಿತರು, ಶಾಸಕರು ಸಂಘದ ಹಿರಿಯರು ಎಲ್ಲರೂ ನಿರ್ಧಾರ ಮಾಡಿ ಈ ಸ್ಥಾನ ಕೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಸಭೆ ಅಭ್ಯರ್ಥಿ ನಟ ಜಗ್ಗೇಶ್ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತಾನಾಡಿದ ಅವರು, ಚಿಂತನೆಗಳು ಇತ್ತು ಮುಂದಿನ ದಿನಗಳಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂದು ನನಗೆ ಕಲ್ಪನೆ ಇರಲಿಲ್ಲ. ಪಕ್ಷ ಮತ್ತು ಸಂಘಟನೆಗೆ ಧನ್ಯವಾದಗಳು. ನನಗೆ ಹಿರಿಯರು ಪೋನ್ ಮಾಡಿ ದಾಖಲೆ ತಯಾರಿ ನಡೆಸಿಕೊಳ್ಳಲು ಹೇಳಿದ್ದರು. ಆಗಲು ನನಗೆ ನಂಬಿಕೆ ಇರಲಿಲ್ಲ. ಹಾಗಾಗಿ ಇದು ಸಂಪೂರ್ಣ ರಾಯರ ಆಶೀರ್ವಾದದಿಂದ ಬಂದಿದೆ ಎಂದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

ನಾಳೆ ನಾಮಿನೇಷನ್ ಮಾಡುತ್ತೇನೆ. ಇವತ್ತು ಇದಕ್ಕೆ ಬೇಕಾದ ದಾಖಲೆ ಸಿದ್ದತೆ ಮಾಡಿಕೊಳ್ಳುತ್ತೇನೆ. ನನಗೆ ನನ್ನ ಹೆಂಡತಿ ಕೂಡ ಇದರಲ್ಲಿ ಬಹಳ ಸಹಾಯ ಮಾಡುತ್ತಿದ್ದಾಳೆ. ಅವಳಿಗೂ ಧನ್ಯವಾದ. ನನಗೆ ನಿರೀಕ್ಷೆ ಇಲ್ಲದಿರುವುದರಿಂದ ದಾಖಲೆ ಸಂಗ್ರಹಿಸಲು ವಿಳಂಬ ಆಗಿದೆ. ದಾಖಲೆ ಸಂಗ್ರಹದ ಒತ್ತಡದಲ್ಲಿ ಇದ್ದೇನೆ. ಎಲ್ಲಾ ಮುಗಿಸಿಕೊಂಡು ನಾಳೆ ನಾಮಪತ್ರ ಸಲ್ಲಿಕೆ‌ ಮಾಡುತ್ತೇನೆ ಎಂದು ನವರಸ ನಾಯಕ ಜಗ್ಗೇಶ್ ಅವರು ತಿಳಿಸಿದ್ದಾರೆ.

ನಾನು ಯಾವುದೇ ಪ್ರಯತ್ನ ಮಾಡಿಲ್ಲ. ನಾನು ಯಾವ ಹುದ್ದೆನೂ ಕೇಳಿಲ್ಲ. ಕಳೆದ ಬಾರಿ ಕಡೆಗಳಿಗೆಯಲ್ಲಿ ಯಶವಂತಪುರದಲ್ಲಿ ನಿಲ್ಲಲು ಹೇಳಿದರು. ಆಗ ನಾನು ಬೇಡ ಅಂದೆ ಕಾರಣ ಏನಂದರೆ ನಾವು ವಿಧಾನಸಭೆಗೆ ಸ್ಪರ್ಧೆ ಮಾಡಬೇಕಾದರೆ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿರಬೇಕು. ಆಗ ನನ್ನ ಮೇಲೆ ವಿಶ್ವಾಸ ಇತ್ತು. 12 ಸಾವಿರ ಇದ್ದ ಮತಗಳನ್ನು 61ಸಾವಿರ ಮತಕ್ಕೆ ತಂದಿದ್ದೆ. ನನಗೂ ಆಶ್ಚರ್ಯ ಆಯಿತು. ಇದರಿಂದ ನನಗೆ ಮುಂದಿನ ದಿನಗಳಲ್ಲಿ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಆದ್ದರಿಂದ, ನನ್ನ ವೃತ್ತಿಯಲ್ಲಿ ಮುಂದುವರೆಯಿತ್ತಿದ್ದೆ. ನನಗೆ ವಕ್ತಾರ ಹುದ್ದೆ ಕೊಟ್ಟಿದ್ದರು, ಸಂಪೂರ್ಣವಾಗಿ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾರೆ.

ನನಗೆ ಭಾಷೆ ಸಮಸ್ಯೆ ಇಲ್ಲ. ನಾನು ಹಿಂದಿ, ಇಂಗ್ಲಿಷ್, ಕನ್ನಡ ತಮಿಳು ಈ ಎಲ್ಲಾ ಭಾಷೆ ಮಾತನಾಡುತ್ತೇನೆ. ಸ್ವಲ್ಪ ಓದಿ ತಿಳಿದುಕೊಂಡಿದ್ದೇನೆ. ಹೆಚ್ಚಿನ ವಿಚಾರ ತಿಳಿದುಕೊಳ್ಳಲು ಹಿರಿಯರ ಸಲಹೆ ಪಡೆಯುತ್ತೇನೆ. ಕಾಯಾ, ವಾಚಾ, ಮನಸ್ಸಾ ಕನ್ನಡದ ಡಿಂಡಿಮವನ್ನು ಖಂಡಿತವಾಗಿ ರಾಷ್ಟ್ರ ಮಟ್ಟದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತೇನೆ. ಹಿಂದಿ ಹೇರಿಕೆ ಬಗ್ಗೆ ಪ್ರತಿಕ್ರಿಯಿಸದೆ, ಒಳ್ಳೆಯ ಕೆಲಸಕ್ಕೆ ಹೋಗುತ್ತಿದ್ದೇನೆ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...