Sunday, March 23, 2025
Sunday, March 23, 2025

ಇನ್ನೆರಡು ದಿನಗಳಲ್ಲಿ ಮಾಮೂಲು ಮಳಗಾಲ ಆರಂಭ

Date:

ಬಿಸಿಲಿನ ತಾಪದಿಂದ ಸುಸ್ತಾಗಿದ್ದ ಜನರಿಗೆ ನಿರಾಳತೆ ಸಿಕ್ಕಿದೆ. ಭಾರತದ ಜೀವನಾಡಿ ಎಂದು ಪರಿಗಣಿಸಲ್ಪ ಟ್ಟಿರುವ ನೈಋತ್ಯ ಮಾನ್ಸೂನ್ ಈ ಬಾರಿ 3 ದಿನಗಳ ಮುನ್ನವೇ ಕೇರಳಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 29ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು 2 ದಿನಗಳಲ್ಲಿ ಕರ್ನಾಟಕಕ್ಕೆ ಪ್ರವೇಶ ಪಡೆಯುವ ನಿರೀಕ್ಷೆ ಇದೆ ಎನ್ನಲಾಗಿದೆ.

ಕೇರಳದ ಮೇಲೆ ಮಾನ್ಸೂನ್‌ನ ಆರಂಭವು 4 ತಿಂಗಳ ಅವಧಿಯ ಮೂಲಕ ಭಾರತದ ಮೇಲೆ ನೈಋತ್ಯ ಮಾನ್ಸೂನ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿ ಎಂದು ಪರಿಗಣಿಸಲ್ಪಟ್ಟಿರುವ ನೈಋತ್ಯ ಮಾನ್ಸೂನ್ ತನ್ನ ಸಾಮಾನ್ಯ ಆರಂಭದ ದಿನಾಂಕವಾದ ಜೂನ್ 1 ಕ್ಕಿಂತ 3 ದಿನಗಳ ಮುಂಚಿತವಾಗಿ ಆಗಮಿಸಿದೆ.

ಪ್ರಪಂಚದ ಕೃಷಿ ಉತ್ಪನ್ನಗಳ ಅತಿದೊಡ್ಡ ಉತ್ಪಾದಕರು ಹಾಗೂ ಕೃಷಿ ಸರಕುಗಳ ಗ್ರಾಹಕರಾಗಿರುವ ಭಾರತದ ರೈತರು ತಮ್ಮ ಭೂಮಿಗೆ ನೀರುಣಿಸಲು ಮಾನ್ಸೂನ್ ಮಳೆಯ ಮೇಲೆ ಹೆಚ್ಚಾಗಿ ಅವಲಂಬಿತರಾಗಿದ್ದಾರೆ. ಶೇ. 50 ರಷ್ಟು ಭಾರತದ ಕೃಷಿ ಭೂಮಿಗೆ ನೀರಾವರಿ ಕೊರತೆ ಇದೆ.

ನೈಋತ್ಯ ಮಾನ್ಸೂನ್ ಜೂನ್ 1 ರಂದು ಪ್ರಾರಂಭವಾಗುವ ಸಾಮಾನ್ಯ ದಿನಾಂಕದ ಬದಲು ಮೇ 29 ರ ಭಾನುವಾರದಂದು ಕೇರಳದಲ್ಲಿ ಆರಂಭವಾಗಿದೆ ಎಂದು ಐಎಂಡಿಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...

Department of Tourism ಕೌಶಲ್ಯಾಭಿವೃದ್ಧಿಗೆ ಪ.ಜಾ/ ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Department of Tourism ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್...

Shivamogga News ವಹಿಸಿರುವ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ನಿರ್ವಹಿಸುವೆ- ವಸಂತ ಹೋಬಳಿದಾರ್

Shivamogga News ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ರೋಟರಿಯಂತಹ ಸಂಸ್ಥೆಗಳು...

Rotary Club Shivamogga ಸಮಾಜದಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯಮಾಡುವುದು ರೋಟರಿಸಂಸ್ಥೆಯ ಗುರಿ-ಸಿ.ಎ.ದೇವ್ ಆನಂದ್

Rotary Club Shivamogga ವಿಶ್ವದ ಎಲ್ಲ ದೇಶಗಳಲ್ಲಿ ಹೆಚ್ಚು ಸೇವಾ ಕಾರ್ಯಗಳನ್ನು...