Wednesday, January 21, 2026
Wednesday, January 21, 2026

ಇನ್ನೆರಡು ದಿನಗಳಲ್ಲಿ ಮಾಮೂಲು ಮಳಗಾಲ ಆರಂಭ

Date:

ಬಿಸಿಲಿನ ತಾಪದಿಂದ ಸುಸ್ತಾಗಿದ್ದ ಜನರಿಗೆ ನಿರಾಳತೆ ಸಿಕ್ಕಿದೆ. ಭಾರತದ ಜೀವನಾಡಿ ಎಂದು ಪರಿಗಣಿಸಲ್ಪ ಟ್ಟಿರುವ ನೈಋತ್ಯ ಮಾನ್ಸೂನ್ ಈ ಬಾರಿ 3 ದಿನಗಳ ಮುನ್ನವೇ ಕೇರಳಕ್ಕೆ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 29ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು 2 ದಿನಗಳಲ್ಲಿ ಕರ್ನಾಟಕಕ್ಕೆ ಪ್ರವೇಶ ಪಡೆಯುವ ನಿರೀಕ್ಷೆ ಇದೆ ಎನ್ನಲಾಗಿದೆ.

ಕೇರಳದ ಮೇಲೆ ಮಾನ್ಸೂನ್‌ನ ಆರಂಭವು 4 ತಿಂಗಳ ಅವಧಿಯ ಮೂಲಕ ಭಾರತದ ಮೇಲೆ ನೈಋತ್ಯ ಮಾನ್ಸೂನ್ ಋತುವಿನ ಆರಂಭವನ್ನು ಸೂಚಿಸುತ್ತದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿ ಎಂದು ಪರಿಗಣಿಸಲ್ಪಟ್ಟಿರುವ ನೈಋತ್ಯ ಮಾನ್ಸೂನ್ ತನ್ನ ಸಾಮಾನ್ಯ ಆರಂಭದ ದಿನಾಂಕವಾದ ಜೂನ್ 1 ಕ್ಕಿಂತ 3 ದಿನಗಳ ಮುಂಚಿತವಾಗಿ ಆಗಮಿಸಿದೆ.

ಪ್ರಪಂಚದ ಕೃಷಿ ಉತ್ಪನ್ನಗಳ ಅತಿದೊಡ್ಡ ಉತ್ಪಾದಕರು ಹಾಗೂ ಕೃಷಿ ಸರಕುಗಳ ಗ್ರಾಹಕರಾಗಿರುವ ಭಾರತದ ರೈತರು ತಮ್ಮ ಭೂಮಿಗೆ ನೀರುಣಿಸಲು ಮಾನ್ಸೂನ್ ಮಳೆಯ ಮೇಲೆ ಹೆಚ್ಚಾಗಿ ಅವಲಂಬಿತರಾಗಿದ್ದಾರೆ. ಶೇ. 50 ರಷ್ಟು ಭಾರತದ ಕೃಷಿ ಭೂಮಿಗೆ ನೀರಾವರಿ ಕೊರತೆ ಇದೆ.

ನೈಋತ್ಯ ಮಾನ್ಸೂನ್ ಜೂನ್ 1 ರಂದು ಪ್ರಾರಂಭವಾಗುವ ಸಾಮಾನ್ಯ ದಿನಾಂಕದ ಬದಲು ಮೇ 29 ರ ಭಾನುವಾರದಂದು ಕೇರಳದಲ್ಲಿ ಆರಂಭವಾಗಿದೆ ಎಂದು ಐಎಂಡಿಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ಮನೆರೇಗಾ ಹೆಸರು ಬದಲಿಕೆ ವಿರುದ್ಧ ರಾಜ್ಯದಾದ್ಯಂತ ಪಾದಯಾತ್ರೆ- ಡಿ.ಕೆ.ಶಿವಕುಮಾರ್

D.K. Shivakumar ಕೂಲಿ ಕಾರ್ಮಿಕರ ಹಕ್ಕುಗಳನ್ನು ಕಸಿಯುವ ವಿಬಿ ಜಿ...

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು...

B.Y. Raghavendra 4G ಸ್ಯಾಚುರೇಷನ್ ಯೋಜನೆಯಡಿ ನೂತನ BSNL ಟವರ್ ಉದ್ಘಾಟನೆ

B.Y. Raghavendra ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪುರದಾಳು ಗ್ರಾ.ಪಂ.ನ ಚಿತ್ರಶೆಟ್ಟಿಹಳ್ಳಿಯಲ್ಲಿಮಾನ್ಯ...