Monday, November 17, 2025
Monday, November 17, 2025

ಬೆಂಗಳೂರಿನಲ್ಲಿ ರೈತ ಮುಖಂಡ ಟಿಕಾಯತ್ ಮುಖಕ್ಕೆ ಮಸಿ ಎರಚಿದ ಪ್ರಸಂಗ

Date:

ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸಭೆ ವೇಳೆಯೇ ಭಾರತೀಯ ಕಿಸಾನ್ ಯುನಿಯನ್ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿ ಹಲ್ಲೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರೈತ ಮುಖಂಡರ ಸಭೆ ವೇಳೆ ಏಕಾಏಕಿ ಗೊಂದಲ, ಗಲಾಟೆ ಆರಂಭವಾಗಿದೆ. ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯಧುವೀರ್ ಸಿಂಗ್ ಅವರ ಮೇಲೆ ಮಸಿ ಎರಚಲಾಗಿದೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಸುದ್ದಿಗೋಷ್ಠಿ ನಡೆಸುತ್ತಿದ್ದ ರಾಕೇಶ್ ಟಿಕಾಯತ್, ನಾವು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಕೋಡಿಹಳ್ಳಿ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸುತ್ತಿದ್ದಂತೆ ಮುಖಂಡರ ನಡುವೆ ವಾಗ್ವಾದ ಆರಂಭವಾಗಿದೆ. ಕುರ್ಚಿಯನ್ನು ಎಳೆದಾಡಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದೇ ವೇಳೆಯಲ್ಲಿ ಟಿಕಾಯತ್ ಮತ್ತು ಯಧುವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ

CM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ...

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್

Children's Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ...