Monday, December 15, 2025
Monday, December 15, 2025

ವಿಮಾನ ನಿಲ್ದಾಣ ಸ್ಥಾಪನೆ:ಯುವಜನಕ್ಕೆ ಉದ್ಯೋಗಾವಾಕಾಶ- ಬಿವೈಆರ್

Date:

ಶಿವಮೊಗ್ಗ ನಗರದಲ್ಲಿ ಶ್ರೀಮಂತರು ಪ್ರಯಾಣಿಸಲು ವಿಮಾನ ನಿಲ್ದಾಣ ನಿರ್ಮಿಸುತ್ತಿಲ್ಲ. ಜಿಲ್ಲೆಯ ಯುವ ಪೀಳಿಗೆಗೆ ಉದ್ಯೋಗ ಅವಕಾಶ ದೊರೆಯಲಿ ಎಂಬ ಉದ್ದೇಶದಿಂದ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ‘ಸರ್ಕಾರದ ಯೋಜನೆ ಪಡೆಯಲು ನೂರಾರು ಜನ ಅರ್ಜಿ ಹಾಕುತ್ತಾರೆ. ಆದರೆ, ಅಯ್ಕೆ ಸಮಿತಿ ಕೆಲವೇ ಫಲಾನುಭವಿಗಳನ್ನು ಆಯ್ಕೆ ಮಾಡುತ್ತದೆ. ಆಯ್ಕೆಯಾಗದವರು ಅಸಮಾಧಾನ ಹೊಂದಬಾರದು’ ಎಂದು ಹೇಳಿದರು.

ಶಿವಮೊಗ್ಗ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ದೇವರಾಜ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಆಯೋಜಿಸಿದ್ದ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಿರುವುದರಿಂದ ಬಂಡವಾಳಶಾಹಿಗಳು ಕೈಗಾರಿಕೆ ಸ್ಥಾಪಿಸಲು ಮುಂದಾಗಲಿದ್ದಾರೆ.
ಕೈಗಾರಿಕೆ ಸ್ಥಾಪನೆಯಿಂದ ಜಿಲ್ಲೆಯ ಯುವಕರಿಗೆ ಉದ್ಯೋಗವಕಾಶ ದೊರೆಯಲಿದೆ. ಒಂದೂವರೆ ಸಾವಿರ ಕೋಟಿ ವೆಚ್ಚದಲ್ಲಿ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣವಾಗಲಿದ್ದು, ಶೀಘ್ರದಲ್ಲಿ ಕೇಂದ್ರ ರೈಲ್ವೆ ಸಚಿವರು ಶಂಕುಸ್ಥಾಪನೆ ನೆರವೇರಿಸುವರು. ಜಿಲ್ಲೆಯಿಂದ 8 ರಾಜ್ಯಗಳಿಗೆ ರೈಲು ಸಂಪರ್ಕ ದೊರೆಯಲಿದ್ದು, ರೈತರು ಬೆಳೆದ ಬೆಳೆ ಇತರೆ ರಾಜ್ಯಕ್ಕೆ ಸಾಗಿಸಲು ಅನುಕೂಲವಾಗಲಿದೆ. ರೈತರು ಹಾಗೂ ಕೂಲಿಕಾರ್ಮಿಕರು ಆರ್ಥಿಕವಾಗಿ
ಅಭಿವೃದ್ಧಿಯಾಗಲಿದ್ದಾರೆ ಎಂದರು.

ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿರ್ದೇಶಕರಾದ ಭದ್ರಾಪುರ ಹಾಲಪ್ಪ, ಭೋವಿ ಅಭಿವೃದ್ಧಿ ನಿಗಮ ನಿರ್ದೇಶಕ ತೊಗರ್ಸಿ ಸಣ್ಣ ಹನುಮಂತಪ್ಪ, ಅಲೆಮಾರಿ ಅಭಿವೃದ್ಧಿ ನಿಗಮ ನಿರ್ದೇಶಕ ಕೆಂಗಟ್ಟಿ ಲಕ್ಷ್ಮಣ್, ತಾಲ್ಲೂಕು ಪಂಚಾಯಿತಿ ಇಒ ಪರಮೇಶ್, ವಿವಿಧ ಇಲಾಖೆ ಅಧಿಕಾರಿಗಳಾದ ಉಮೇಶ್, ಶಿಲ್ಪಾ ದೊಡ್ಮನಿ, ಸುಪ್ರೀತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...