ರಾಜಸ್ಥಾನದ ಉದಯ ಪುರದಲ್ಲಿ ಆಯೋಜಿಸಿದ್ದ ಮಾದರಿಯಲ್ಲಿ ರಾಜ್ಯದಲ್ಲೂ ಚಿಂತನಾ ಶಿಬಿರ ನಡೆಸಲು ಕರ್ನಾಟಕ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.
ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುಮಾರು 400 ಜನ ಕಾರ್ಯಕರ್ತ- ಮುಖಂಡರ ಜತೆ ಸೇರಿ ಚರ್ಚಿಸಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಐವರು ಹಿರಿಯ ನಾಯಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.
ಜೂನ್ 1,2,3 ರಂದು ಶಿಬಿರ ನಡೆಯಲಿದ್ದು, ಆ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ಬೆಲೆ ಏರಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಪಕ್ಷ ಸಂಘಟನೆ ಕುರಿತು ವಿಧಾನ ಪರಿಷತ್ತಿನ
ಪ್ರತಿ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸಮಿತಿ ರಚಿಸಲಾಗಿದೆ.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ರೈತ ಸಮಿತಿ, ರಾಜಕೀಯ ಬೆಳವಣಿಗೆಗಳು ಚುನಾವಣೆ ಚರ್ಚೆಗೆ ಡಾ.ಜಿ ಪರಮೇಶ್ವರ್ ನೇತೃತ್ವದ ಸಮಿತಿ, ಯುವಕರ ಬಗ್ಗೆ ಕೃಷ್ಣಭೈರೇಗೌಡ ನೇತೃತ್ವದ ಸಮಿತಿ ರಚನೆಯಾಗಿದೆ ಎಂದು ತಿಳಿಸಿದರು.
ಶಿಬಿರದಲ್ಲಿ 500 ಕೂ ಹೆಚ್ಚು ಜನ ಭಾಗವಹಿಸಲಿದೆ. 500 ಜನರನ್ನು 6 ಭಾಗ ಮಾಡಿ ಚರ್ಚೆಗೆ ಬಿಡುತ್ತೇವೆ. ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಮುಂಚೂಣಿ ಘಟಕಳ ಸದಸ್ಯರು ಪಾಲ್ಗೊಳಲಿದ್ದಾರೆ.
ಮುಂದೆಯೂ ಪಕ್ಷ ಹೇಗೆ ಕೆಲಸ ಮಾಡಬೇಕೆಂಬ ಬಗ್ಗೆ ಶಿಬಿರದಲ್ಲಿ ಚರ್ಚೆ ನಡೆಯಲಿದೆ.