Monday, February 16, 2026
Monday, February 16, 2026

ರಾಜ್ಯದಲ್ಲೂ ಉದಯಪುರ ಚಿಂತನೆಯ ಮಾದರಿಶಿಬಿರ-ಡಿಕೆಶಿ

Date:

ರಾಜಸ್ಥಾನದ ಉದಯ ಪುರದಲ್ಲಿ ಆಯೋಜಿಸಿದ್ದ ಮಾದರಿಯಲ್ಲಿ ರಾಜ್ಯದಲ್ಲೂ ಚಿಂತನಾ ಶಿಬಿರ ನಡೆಸಲು ಕರ್ನಾಟಕ ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುಮಾರು 400 ಜನ ಕಾರ್ಯಕರ್ತ- ಮುಖಂಡರ ಜತೆ ಸೇರಿ ಚರ್ಚಿಸಿ ಈ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಇದಕ್ಕಾಗಿ ಐವರು ಹಿರಿಯ ನಾಯಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು.

ಜೂನ್ 1,2,3 ರಂದು ಶಿಬಿರ ನಡೆಯಲಿದ್ದು, ಆ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಅಧ್ಯಕ್ಷತೆಯಲ್ಲಿ ಬೆಲೆ ಏರಿಕೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಪಕ್ಷ ಸಂಘಟನೆ ಕುರಿತು ವಿಧಾನ ಪರಿಷತ್ತಿನ
ಪ್ರತಿ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಸಮಿತಿ ರಚಿಸಲಾಗಿದೆ.

ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ರೈತ ಸಮಿತಿ, ರಾಜಕೀಯ ಬೆಳವಣಿಗೆಗಳು ಚುನಾವಣೆ ಚರ್ಚೆಗೆ ಡಾ.ಜಿ ಪರಮೇಶ್ವರ್ ನೇತೃತ್ವದ ಸಮಿತಿ, ಯುವಕರ ಬಗ್ಗೆ ಕೃಷ್ಣಭೈರೇಗೌಡ ನೇತೃತ್ವದ ಸಮಿತಿ ರಚನೆಯಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ 500 ಕೂ ಹೆಚ್ಚು ಜನ ಭಾಗವಹಿಸಲಿದೆ. 500 ಜನರನ್ನು 6 ಭಾಗ ಮಾಡಿ ಚರ್ಚೆಗೆ ಬಿಡುತ್ತೇವೆ. ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಮುಂಚೂಣಿ ಘಟಕಳ ಸದಸ್ಯರು ಪಾಲ್ಗೊಳಲಿದ್ದಾರೆ.

ಮುಂದೆಯೂ ಪಕ್ಷ ಹೇಗೆ ಕೆಲಸ ಮಾಡಬೇಕೆಂಬ ಬಗ್ಗೆ ಶಿಬಿರದಲ್ಲಿ ಚರ್ಚೆ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...