Sunday, July 26, 2026
Sunday, July 26, 2026

ಡಾ.ರಾಜ್ ಕುಮಾರ್ ಅಕಾಡೆಮಿಯ 8 ಮಂದಿ ಸಿವಿಲ್ ಪರೀಕ್ಷೆಯಲ್ಲಿ ತೇರ್ಗಡೆ

Date:

ಕೇಂದ್ರ ಲೋಕಸೇವಾ ಆಯೋಗ ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪರೀಕ್ಷೆಯನ್ನು ನಡೆಸಿತ್ತು. 2021ನೇ ಸಾಲಿನ ಈ ಪರೀಕ್ಷೆಯ ಫಲಿತಾಂಶ ( ಮೇ 30 ಪ್ರಕಟವಾಗಿದೆ.

ಈ ಅತ್ಯುನ್ನತ ಪರೀಕ್ಷೆಯಲ್ಲಿ ದೇಶದ ಸುಮಾರು 685 ಮಂದಿ ತೇರ್ಗಡೆಯಾಗಿದ್ದಾರೆ.
2021ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದಿಂದ 27 ಮಂದಿ ತೇರ್ಗಡೆಯಾಗಿದ್ದರ ಬಗ್ಗೆ ಇದೂವರೆಗೂ ಮಾಹಿತಿ ಸಿಕ್ಕಿದೆ. ವಿಶೇಷ ಅಂದರೆ ಇವರಲ್ಲಿ ಡಾ.ರಾಜ್​ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 8 ಮಂದಿ ಕೂಡ ಸೇರಿಕೊಂಡಿದ್ದಾರೆ.

ಯುಪಿಎಸ್‌ಸಿಗೆ ಡಾ.ರಾಜ್‌ಕುಮಾರ್ ಅಕಾಡೆಮಿ ತರಬೇತಿ
ಡಾ.ರಾಜ್​ಕುಮಾರ್ ಅಕಾಡೆಮಿ ಹಲವು ವರ್ಷಗಳಿಂದ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಈ ಅಕಾಡೆಮಿ ಸಿವಿಲ್ ಸರ್ವೀಸ್ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡುತ್ತಿದ್ದು, ಪ್ರತಿ ವರ್ಷ ಈ ಅಕಾಡೆಮಿಯಿಂದ ಹಲವು ಮಂದಿ ಉತ್ತಮ ರ್‍ಯಾಂಕ್ ಪಡೆದು ಯುಪಿಎಸ್​ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುತ್ತಿದ್ದಾರೆ ಅದರಂತೆ, ಈ ಬಾರಿ ಕೂಡ 8 ಮಂದಿ ಇದೇ ಅಕಾಡೆಮಿಯಿಂದ ತೇರ್ಗಡೆಯಾಗಿದ್ದಾರೆ.

ಇದೇ ಈ ಬಾರಿ ಕೂಡ ಹಲವು ಮಂದಿ ಈ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದರು.
ಡಾ.ರಾಜ್​ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿಯಿಂದ ತೇರ್ಗಡೆಯಾದ 8 ಮಂದಿಯ ಲಿಸ್ಟ್ ಇಲ್ಲಿದೆ

ಡಾ.ರಾಜ್​ಕುಮಾರ್ ಅಕಾಡೆಮಿಯಿಂದ ತೇರ್ಗಡೆಯಾದವರ ಪಟ್ಟಿ
ಬೇನಕ ಪ್ರಸಾದ್ 92ನೇ ರ್‍ಯಾಂಕ್
ಮೇಘನಾ ಕೆ ಟಿ 425ನೇ ರ್‍ಯಾಂಕ್
ರಾಜೇಶ್ ಪೊನ್ನಪ್ಪ 222ನೇ ರ್‍ಯಾಂಕ್
ಪ್ರೀತಿ ಪಂಚಾಲ್ 449ನೇ ರ್‍ಯಾಂಕ್
ಪ್ರಶಾಂತ್ ಕುಮಾರ್ ಬಿಓ 641 ನೇ ರ್‍ಯಾಂಕ್
ರವಿನಂದನ್ ಬಿಎಂ 455ನೇ ರ್‍ಯಾಂಕ್
ನಿಖಿಲ್ ಬಿ ಪಾಟೀಲ್ 139ನೇ ರ್‍ಯಾಂಕ್
ದೀಪಕ್ ಆರ್ ಸೇಟ್ 311ನೇ ರ್‍ಯಾಂಕ್
ದೃಷ್ಟಿ ಸಮಸ್ಯೆಯ ಮೇಘನಾ 2ನೇ ಬಾರಿನೂ ಪಾಸ್
ಡಾ.ರಾಜ್​ಕುಮಾರ್ ಸಿವಿಲ್ ಸರ್ವೀಸ್ ಅಕಾಡೆಮಿಯಿಂದ ಯುಪಿಎಸ್​ಸಿ ಪಾಸ್ ಆದವರಲ್ಲಿ ಮೇಘನಾ ಎಂಬುವವರಿಗೆ ಪೂರ್ಣ ಪ್ರಮಾಣದಲ್ಲಿ ಕಣ್ಣುಕಾಣುವುದಿಲ್ಲ. ಇವರು 425ನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ.

ಈ ಹಿಂದೆ ಕೂಡ ಇದೇ ಅಕಾಡೆಮಿಯಲ್ಲಿ ಪರೀಕ್ಷೆ ಬರೆದು 465ನೇ ರ್‍ಯಾಂಕ್ ಪಡೆದಿದ್ದರು. ಮೇಘನಾ ಮೂಲತಃ ಮೈಸೂರು ಜಿಲ್ಲೆಯ ಪರಿಯಾಪಟ್ಟಣದವರಾದ ಮೇಘನಾ ದೃಷ್ಟಿ ಸಮಸ್ಯೆಯ ಹೊರತಾಗಿಯೂ ಯುಪಿಎಸ್​ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಮಹಿಳೆಯರ ಆರ್ಥಿಕ ಸ್ವಾವಲಂಬನೆಯು ದೇಶದ ಅಭಿವೃದ್ಧಿಗೆ ಪೂರಕ- ಡಾ.ಹೆಚ್.ಬಿ.ಮಂಜುನಾಥ್,ದಾವಣಗೆರೆ.

Shivamogga News ದಾವಣಗೆರೆ.ಜು. 24. ಆರ್ಥಿಕ ಶಿಸ್ತು ಮಹಿಳೆಯರಲ್ಲಿ ತುಸು ಹೆಚ್ಚು,...

Gruhalakshmi Yojana ಗೃಹಲಕ್ಷ್ಮಿ ಯೋಜನೆ ನವೀಕರಣ: ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆ. ಜನರು ಸಹಕರಿಸಿ- ಹೆಚ್.ಎಂ.ಮಧು.

Gruhalakshmi Yojana ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಗೃಹಲಕ್ಷಿö್ಮ ಯೋಜನೆಯಡಿ...

Canara Bank ಹೊಳಲೂರಿನ ಸಿಬಿಆರ್ ಎಸ್ಇಟಿಐ ನಲ್ಲಿ ಬ್ಯಾಂಕ್ ಸಾಲ ಸೌಲಭ್ಯ ಮತ್ತು ಉದ್ಯಮಶೀಲತಾ ಕಾರ್ಯಕ್ರಮ.

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ...