Thursday, May 14, 2026
Thursday, May 14, 2026

ಬೇಷ್ ಡಾ.ಪ್ರಶಾಂತ್: ಅಭಿನಂದನೆಗಳು

Date:

ಕೇಂದ್ರ ನಾಗರಿಕ ಸೇವಾ ಆಯೋಗ 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದೆ.

ಯುಪಿಎಸ್​​​ಸಿ ಪರೀಕ್ಷೆಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಅಬ್ಬರ ಜೋರಾಗಿದೆ.
ಶಿವಮೊಗ್ಗದ ಪ್ರಶಾಂತ್ ಕುಮಾರ್ ಬಿಒ ಎಂಬ ಅಭ್ಯರ್ಥಿ ತಮ್ಮ ಮೊದಲ ಪ್ರಯತ್ನದಲ್ಲೇ ಯುಪಿಎಸ್​​ಸಿ ಪಾಸ್ ಮಾಡಿದ್ದಾರೆ. ಯಾವುದೇ ಕೋಚಿಂಗ್ ಸೆಂಟರ್​ಗೆ ಹೋಗದೇ 641ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಪ್ರಶಾಂತ್ ಕುಮಾರ್​ ತಂದೆ ಓಂಕಾರಪ್ಪ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಷಯ ಉಪನ್ಯಾಸಕರಾಗಿದ್ದು,ತಾಯಿ ರೇಖಾ ಜೆ, ಗೃಹಿಣಿಯಾಗಿದ್ದಾರೆ. ಪ್ರಶಾಂತ್​​ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್​​ನಲ್ಲಿ ಎಂಬಿಬಿಎಸ್ ಪದವಿ ಪಡೆದುಕೊಂಡಿದ್ದಾರೆ.
ಸಾರ್ವಜನಿಕರ ವಲಯದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಮತ್ತು ಜನರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಬಯಕೆಯನ್ನ ಹೊಂದಿದ್ದು, ಹೀಗಾಗಿ ಯುಪಿಎಸ್​​ಸಿ ಆಯ್ಕೆ ಮಾಡಿಕೊಂಡಿರುವುದಾಗಿ ಪ್ರಶಾಂತ್ ತಿಳಿಸಿದ್ದಾರೆ.

ಬೆಂಗಳೂರಿನ ಇನ್ಸೈಟ್ಸ್ ಐಎಎಸ್ ಅಕಾಡೆಮಿಯ 20 ಮಂದಿ ಟಾಪರ್ಸ್ ಆಗಿದ್ದಾರೆ. ಉಳಿದಂತೆ ಅಕ್ಕ ಐಎಎಸ್ ಅಕಾಡೆಮಿಯ 6 ಮಂದಿ ಪಾಸ್​​ ಆಗಿದ್ದಾರೆ. ಒಟ್ಟಾರೆ ಕರ್ನಾಟಕದಿಂದ 27 ಅಭ್ಯರ್ಥಿಗಳು ಈ ಸಲದ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಇನ್ನೂ ಗಂಗಾವತಿಯ ದಂತ ವೈದ್ಯೆ ಅಪೂರ್ವ ಬಾಸೂರು 191ನೇ ರ್‍ಯಾಂಕ್ ಗಳಿಸಿದ್ದು, ದಾವಣಗೆರೆಯ ಅವಿನಾಶ್ 31ನೇ ಸ್ಥಾನ ಪಡೆದಿದ್ದಾರೆ.

ಇನ್ನೂ ದೆಹಲಿಯ ಜಾಮಿಯಾ ಮಿಲಿಯಾ ಕೋಚಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಂಡಿರುವ ಒಟ್ಟು 23 ಅಭ್ಯರ್ಥಿಗಳು ಯುಪಿಎಸ್​ಸಿ ಪರೀಕ್ಷೆ ಪಾಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...